ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ನಿರ್ಮಿಸಿಕೊಳ್ಳದಿದ್ದರೆ ಸೌಲಭ್ಯ ಕಡಿತ

Last Updated 27 ನವೆಂಬರ್ 2017, 6:42 IST
ಅಕ್ಷರ ಗಾತ್ರ

ಚಾಮರಾಜನಗರ: ಸ್ವಚ್ಛ ಭಾರತ ಅಭಿಯಾನದಡಿ ಬಯಲು ಶೌಚ ನಿರ್ಮೂಲನೆ ಮಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲ ಮನೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಕೋರಲಾಗಿದೆ.

ಡಿ. 30ರೊಳಗೆ ನಗರಸಭೆಯ ಎಲ್ಲ ವಾರ್ಡ್‌ಗಳನ್ನು ಬಯಲು ಶೌಚ ಮುಕ್ತವೆಂದು ಘೋಷಿಸುವ ಗುರಿ ಹೊಂದಲಾಗಿದೆ. ಈಗಾ ಗಲೇ ಕಾರ್ಯಾದೇಶ ನೀಡಿರುವ, ಆಯ್ಕೆ ಯಾಗಿರುವ ಎಲ್ಲ ನಾಗರಿಕರು 7 ದಿನದೊಳಗೆ ಶೌಚಾ ಲಯ ನಿರ್ಮಿಸಿ ಕೊಳ್ಳಬೇಕು. ತಪ್ಪಿದಲ್ಲಿ ಅರ್ಜಿಗಳನ್ನು ರದ್ದುಗೊಳಿಸಲಾ ಗುವುದು. ಬಳಿಕ, ಸ್ವಂತ ಖರ್ಚಿನಿಂದಲೇ ಶೌಚಾಲಯ ನಿರ್ಮಿಸಿಕೊಳ್ಳಬೇಕಾಗುತ್ತದೆ.

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳದೆ, ಬಯಲನ್ನೇ ಶೌಚಕ್ಕೆ ಬಳಸಿಕೊಂಡರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಮತ್ತು ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT