ಸಕಲೇಶಪುರ: ತಾಲ್ಲೂಕಿನಲ್ಲಿ ಭತ್ತದ ಬೆಳೆಗೆ ಸೈನಿಕ ಹುಳುಗಳ ಬಾಧೆ ಇದ್ದು, ಭತ್ತದ ಬೆಳೆ ನಾಶ ಮಾಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಹಾನುಬಾಳು ಹೋಬಳಿ ವ್ಯಾಪ್ತಿಯ ದಬ್ಬೇಗದ್ದೆಯಲ್ಲಿ ಸುಮಾರು 20 ಎಕರೆ ಪ್ರದೇಶದ ಭತ್ತದ ಗದ್ದೆಯಲ್ಲಿ ಸೈನಿಕ ಹುಳುಗಳ ದಾಳಿಗೆ ಬೆಳೆ ಹಾನಿಯಾಗಿದೆ. ಹೆತ್ತೂರು, ಯಸಳೂರು ಹೋಬಳಿ ವ್ಯಾಪ್ತಿಯಲ್ಲಿ ಸಹ ಸೈನಿಕ ಹುಳುಗಳ ಬಾಧೆಯಿಂದ ರೈತರ ನೆಮ್ಮದಿಗೆ ಭಂಗ ತಂದಿದೆ.