ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಮ್ಯಾ ಸಂಸದೆಯಾಗಿದ್ದ ಅಲ್ಪ ಅವಧಿಯಲ್ಲಿ ಉತ್ತಮವಾಗಿ ಜನಪರ ಕೆಲಸ ಮಾಡಿದ್ದಾರೆ. ಹಲವಾರು ಅಭಿವೃದ್ಧಿ ಯೋಜನೆ ಜಾರಿಗೆ ತಂದು ಹೆಸರು ಗಳಿಸದ್ದಾರೆ. ಕೇಂದ್ರೀಯ ವಿದ್ಯಾಲಯ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆರಂಭ, ಮೈಷುಗರ್ ಹಾಗೂ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಶ್ರಮಿಸಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಗೆ ₹ 48 ಕೋಟಿ ಅನುದಾನ, ಮೆಡಿಕಲ್ ಕಾಲೇಜಿನ ಡಯಾಲಿಸಿಸ್ ಯಂತ್ರ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿ, ರೈತರ ಸಮಸ್ಯೆ ಕುರಿತು ಸಂಸಸ್ನಲ್ಲಿ ಚರ್ಚೆ ನಡೆಸಿದ್ದಾರೆ’ ಎಂದು ಹೇಳಿದರು.