ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡದ ಯೋಧ ನಕ್ಸಲರ ಗುಂಡಿಗೆ ಬಲಿ

Last Updated 28 ನವೆಂಬರ್ 2017, 7:29 IST
ಅಕ್ಷರ ಗಾತ್ರ

ಧಾರವಾಡ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಗ್ಯಾರಾಪತಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ತಾಲ್ಲೂಕಿನ ಮನಗುಂಡಿ ಗ್ರಾಮದ ಸಿಆರ್‌ಪಿಎಫ್‌ ಯೋಧ ಮಂಜುನಾಥ ಜಕ್ಕಣ್ಣವರ(31) ಮೃತಪಟ್ಟಿದ್ದಾರೆ.

ಸಿಆರ್‌ಪಿಎಫ್‌ 113ನೇ ಬೆಟಾಲಿಯನ್‌ನಲ್ಲಿ 12 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು. ಕಾರ್ಯಾಚರಣೆಯಲ್ಲಿ, ಆರು ಗುಂಡುಗಳು ಇವರ ದೇಹವನ್ನು ಹೊಕ್ಕಿದ್ದರಿಂದ ಸ್ಥಳದಲ್ಲೇ ಅಸು ನೀಗಿದ್ದಾರೆ.

‘ಯೋಧನ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಿಗ್ಗೆ 10ಕ್ಕೆ ಧಾರವಾಡಕ್ಕೆ ತರಲಾಗುವುದು. ಇಲ್ಲಿನ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸ್ವಗ್ರಾಮ ಮನಗುಂಡಿವರೆಗೂ ಮೆರವಣಿಗೆ ಮೂಲಕ ಸಾಗಿ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಯೋಧ ಮಂಜುನಾಥ ಅವರಿಗೆ ಪತ್ನಿ ಲಲಿತಾ, ಮೂರೂವರೆ ವರ್ಷದ ಪುತ್ರ ಗಣೇಶ, ಎರಡು ವರ್ಷದ ಪುತ್ರಿ ಲಕ್ಷ್ಮಿ, ತಂದೆ ಶಿವಲಿಂಗಪ್ಪ, ತಾಯಿ ರತ್ನವ್ವ, ಇಬ್ಬರು ಸಹೋದರಿಯರು ಹಾಗೂ ನಾಲ್ವರು ಸಹೋದರರು ಇದ್ದಾರೆ.

ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಮನಗುಂಡಿ ಹಾಗೂ ನಿಗದಿಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದರು. ಪಿಯುಸಿ ಶಿಕ್ಷಣವನ್ನು ನವಲೂರಿನ ಕಾಲೇಜಿನಲ್ಲಿ ಹಾಗೂ ಪದವಿಯನ್ನು ನಗರದ ಅಂಜುಮನ್ ಕಾಲೇಜಿನಲ್ಲಿ ಪಡೆದಿದ್ದರು. 2005ರಲ್ಲಿ ಸಿಆರ್‌ಪಿಎಫ್ ಗೆ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT