ಅಲ್ಲದೆ ಹಿರಿಯ ನಾಯಕರಾದ ಹಂಪನಗೌಡ ಬಾದರ್ಲಿ, ಎನ್.ಎಸ್.ಬೋಸರಾಜು, ಎ.ವಸಂತಕುಮಾರ, ಹಂಪಯ್ಯನಾಯಕ ಸೇರಿದಂತೆ ಜನಪ್ರತಿನಿಧಿಗಳ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ತಾವು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಅಧಿಕಾರ ಬಂದಾಗ ಸಹಜವಾಗಿ ಕೆಲವರಲ್ಲಿ ಭಿನ್ನ ವಿಚಾರಗಳು ಬರುತ್ತವೆ. ವೈಯಕ್ತಿಕ ಪ್ರತಿಷ್ಠೆ ಮತ್ತು ದ್ವೇಷದ ಭಾವನೆ ಯಾರಲ್ಲಿಯೂ ಇಲ್ಲ. ಎಲ್ಲರಲ್ಲೂ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸಿದೆ’ ಎಂದರು.