ಉತ್ತರ ಪ್ರದೇಶದಲ್ಲಿ ರಾಮಮಂದಿರ ಕಟ್ಟಬೇಕು ಎಂದರೆ ಅಯೋಧ್ಯೆಯಲ್ಲಿ ಈ ಧರ್ಮ ಸಭೆ ಮಾಡಬೇಕು. ಅದನ್ನು ಬಿಟ್ಟು ಕರ್ನಾಟಕದಲ್ಲಿ ಸಭೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ರಾಮನ ಹೆಸರು ಹೇಳಿಕೊಂಡು ಬಿಜೆಪಿಯವರು ಇಂತಹ ಸಭೆ ನಡೆಸಿದ್ದಾರೆ ಎಂದು ವ್ಯಂಗ್ಯವಾಡಿದರು.