ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಟಿಪ್ಪರ್, 8 ಟ್ರ್ಯಾಕ್ಟರ್ ಸಹಿತ ಅಕ್ರಮ ಮರಳು ವಶ

Last Updated 29 ನವೆಂಬರ್ 2017, 5:29 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಚಂದ್ರಗುತ್ತಿ ವರದಾ ನದಿಯಿಂದ ಪಟ್ಟಣಕ್ಕೆ ಸೋಮವಾರ ತಡರಾತ್ರಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಗುಂಪಿನ ಮೇಲೆ ಡಿಸಿಬಿ ಪೊಲೀಸರು ಕರಡಿಗೇರಿ ಕ್ರಾಸ್ ಸಮೀಪ ದಾಳಿ ನಡೆಸಿದರು. ಮರಳು ಸಹಿತ  ಮೂರು ಟಿಪ್ಪರ್, ಎಂಟು ಟ್ರ್ಯಾಕ್ಟರ್ ವಶಪಡಿಸಿಕೊಂಡರು.

ಯಾವುದೇ ಭಯವಿಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಧಿಸುವಲ್ಲಿ ಡಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಾಸು, ಚಂದ್ರು, ಪರಮೇಶ್ವರ, ಮಹೇಂದ್ರ, ಲಕ್ಷ್ಮಣ್, ಅಶೋಕ, ರಾಘು, ಅಶೋಕ, ಕನ್ನಪ್ಪ, ಪ್ರವೀಣ, ಪ್ರಶಾಂತ್ ಅವರನ್ನು ಬಂಧಿಸಿ, ಸೊರಬ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾ ವರಿಷ್ಠಾಧಿಕಾರಿ ಅಭಿನವ್ ಖರೆ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅವರ ಹಾಗೂ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ದಳ(ಡಿಸಿಬಿ)ದ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಕೆ. ಹಾಗೂ ಸಿಬ್ಬಂದಿ ಸೇರಿ 12 ಜನರ ತಂಡ ರೈತರಂತೆ ಅಂಗಿ, ಪಂಚೆ, ಟವಲ್ ಧರಿಸಿ ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT