ಬೆಳಗಾವಿ: ಮಾತೃಪೂರ್ಣ ಯೋಜನೆಯಲ್ಲಿ ಅಡುಗೆ ಮಾಡುವ ಕೆಲಸದಿಂದ ತಮಗೆ ಮುಕ್ತಿ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ನಿರ್ವಹಣೆ ಭತ್ಯೆ ಹೆಚ್ಚಿಸಿ
ಜೀವನ ನಿರ್ವಹಣೆ ಭತ್ಯೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗವಿಲಕರ ಹಾಗೂ ಪಾಲಕರ ಒಕ್ಕೂಟ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.