ಉಮಾ ಅವರ ವರ್ತನೆ ವಿರುದ್ಧ ಜಿಲ್ಲೆಯ ಸಂಸದರಾದ ಸಿ.ಎಸ್.ಪುಟ್ಟರಾಜು ಅವರಿಗೆ ದೂರು ಸಲ್ಲಿಸಿದ್ದೆವು. ಸಂಸದರು ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಎಸ್.ಮಹಾದೇವಪ್ಪ ಅವರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಬಸವರಾಜ ರಾಯರಡ್ಡಿ ಹಾಗೂ ಎಂ.ಕೃಷ್ಣಪ್ಪ ಅವರು ಮೈಸೂರು ವಿವಿ ಕುಲಸಚಿವರಿಗೆ ಪತ್ರ ಬರೆದು ಉಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. ಇಷ್ಟಾದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ವಿದ್ಯಾರ್ಥಿಗಳು ಪತ್ರಗಳನ್ನು ಪ್ರದರ್ಶನ ಮಾಡಿದರು.