2013ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಆರ್.ಮದನ್, 2018ರಲ್ಲಿ ಮಂಜುನಾಥಗೌಡ ಸ್ಪರ್ಧಿಸಲಿ ಎಂದು ಬಯಸುತ್ತಿದ್ದಾರೆ ಎಂಬ ಅಭಿಪ್ರಾಯವೂ ಪಕ್ಷದವರಲ್ಲಿ ಇದೆ. ಡಿ. 2ನೇ ವಾರದ ನಂತರ ಮಂಜುನಾಥಗೌಡ ಹಾಗೂ ಅವರ ಬೆಂಬಲಿಗರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.