ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿಗೆ ಶೀಘ್ರವೇ ಸಿಎಂ ಭೇಟಿ

Last Updated 30 ನವೆಂಬರ್ 2017, 7:59 IST
ಅಕ್ಷರ ಗಾತ್ರ

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯದಲ್ಲಿಯೇ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಪ್ರಗತಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ರಿಚರ್ಡ್‌ ವಿನ್ಸೆಂಟ್ ಡಿಸೋಜ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಬಿಂಬಿಸುವ ಪುಸ್ತಕವನ್ನು ಜಿಲ್ಲಾಡಳಿತ ಹೊರ ತರಲಾಗುತ್ತಿದೆ. ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಪ್ರಸ್ತುತ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆಯ ನಿಖರ ಮಾಹಿತಿ ನೀಡಬೇಕು. ಫಲಾನುಭವಿಗಳ ಹೆಸರು, ಸಂಖ್ಯೆ, ಅನುದಾನ ವಿವರವನ್ನು ಡಿ. 5ರ ಒಳಗೆ ನೀಡಬೇಕು ಎಂದು ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಮಾತನಾಡಿ, ಎಂಜಿನಿಯ ರಿಂಗ್ ಕಾಲೇಜು, ಮೆಡಿಕಲ್‌ ಕಾಲೇಜು, ಬೃಹತ್ ನೀರಾವರಿ ಮತ್ತಿತರ ಇಲಾಖೆಗಳಿಂದ ಅಗತ್ಯ ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಉಪ ವಿಭಾಗಾಧಿಕಾರಿ ನಂಜುಂಡೇಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿದ್ದಲಿಂಗ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಯಾದೇವಿ ಗಲಗಲಿ, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ. ಸುರೇಶ್, ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT