ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು. ಜೈನ ಮಿಲನ್ ವಲಯ ನಿರ್ದೇಶಕ ಎಸ್.ಎಸ್.ಸೋಮಪ್ರಭ, ನಿಲುವಾಗಿಲು ದಿಗಂಬರ ಜೈನ ಸಮಾಜದ ಅಧ್ಯಕ್ಷ ಎನ್.ಎಸ್.ಸ್ವಾಮಿ, ಮೈಸೂರು ಜೈನ ಸಮಾಜದ ಅಧ್ಯಕ್ಷ ಎಂ.ಆರ್.ಸುನೀಲ್ ಕುಮಾರ್, ಸರಗೂರು ಜೈನ ಸಮಾಜದ ಅಧ್ಯಕ್ಷ ಬ್ರಹ್ಮದೇವಯ್ಯ, ಬಿ.ಮಟಕೆರೆ ಜೈನ ಸಮಾಜದ ಅಧ್ಯಕ್ಷ ಜಿ.ಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕವೀರನಾಯಕ, ಬಿಜೆಪಿ ಮುಖಂಡ ಡಾ.ಎಚ್.ವಿ.ಕೃಷ್ಣಸ್ವಾಮಿ ಭಾಗವಹಿಸಿದ್ದರು.