ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮರಸ್ಯದ ನಡಿಗೆ ಡಿ. 12ರಂದು

Last Updated 30 ನವೆಂಬರ್ 2017, 11:15 IST
ಅಕ್ಷರ ಗಾತ್ರ

ಮಂಗಳೂರು: ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮರಸ್ಯದ ನಡಿಗೆ ಸೌಹಾರ್ದದೆಡೆಗೆ ಕಾರ್ಯಕ್ರಮವನ್ನು ಡಿಸೆಂಬರ್ 12ರಂದು ಫರಂಗಿಪೇಟೆಯಿಂದ ಮಾಣಿಯವರೆಗೆ ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಬಿ. ರಮಾನಾಥ ರೈ, ಬುದ್ಧಿವಂತರ ಜಿಲ್ಲೆಯಲ್ಲಿ ಸಾಮರಸ್ಯ ಇಲ್ಲದಾಗಿದೆ. ಇತ್ತೀಚಿನ ದಿನಗಳಲ್ಲಿ ಕೋಮು ಸಂಘರ್ಷ ಹೆಚ್ಚಾಗಿದೆ.‌ಇದನ್ನು ನಿವಾರಿಸುವ ದೃಷ್ಟಿಯಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಳಿಗ್ಗೆ 9 ಕ್ಕೆ ಫರಂಗಿಪೇಟೆಯಿಂದ ಜಾಥಾ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಮಾಣಿಯಲ್ಲಿ ಮುಕ್ತಾಯ ಆಗಲಿದೆ. ನಂತರ ಸಾಮರಸ್ಯ ಸಭೆ ನಡೆಯಲಿದೆ. ಸಾಮಾಜಿಕ ಮುಂದಾಳುಗಳು, ಸಾಮರಸ್ಯಕ್ಕಾಗಿ ಹೋರಾಟ ಮಾಡುವವರನ್ನು ಆಮಂತ್ರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT