‘ಮುದ್ದೇಬಿಹಾಳದಲ್ಲಿ ಯಾವುದೇ ಕಾಮಗಾರಿ ಮಾಡದ ಕಾಂಗ್ರೆಸ್ ಸರ್ಕಾರ, ನಾನು ಅಧಿಕಾರದಲ್ಲಿದ್ದಾಗ ಮಾಡಿದ ಯೋಜನೆಗಳನ್ನೇ ಅನುಷ್ಠಾನಕ್ಕೆ ತರುತ್ತಿದೆ. ನೀರಾವರಿ ಸಚಿವ ಎಂ.ಬಿ.ಪಾಟೀಲ ₹ 50 ಸಾವಿರ ಕೋಟಿ ಖರ್ಚು ಮಾಡಬೇಕಿತ್ತು, ಮಾಡಿದ್ದು ಕೇವಲ ₹ 6,400 ಕೋಟಿ. ಇವರ ಸಾಧನೆ ಶೂನ್ಯ. ಮಾತು, ಮಾತಿಗೆ ದಲಿತರ ಪರ ಕಾಳಜಿ ತೋರುವ ಕಾಂಗ್ರೆಸ್ ಡಾ.ಅಂಬೇಡ್ಕರ್ ಅವರ ಶವ ಶಂಸ್ಕಾರಕ್ಕೆ ರಾಜ್ಘಾಟ್ನಲ್ಲಿ ಸ್ಥಳ ನೀಡದೇ ಅವಮಾನ ಮಾಡಿತು. ಅವರಿಗೆ ದಲಿತರು ಮತ ನೀಡಬೇಡಿ’ ಎಂದರು.