ಅಂಗನವಾಡಿ ದಾಖಲೆಗಳ ಹೊರೆ ಕಡಿಮೆ ಮಾಡಬೇಕು, ಪ್ರತಿ ತಿಂಗಳು 5ನೇ ತಾರೀಕಿನ ಒಳಗಾಗಿ ಗೌರವಧನ ಬಿಡುಗಡೆ ಮಾಡಬೇಕು, ನಿವೃತ್ತಿಯಾದ ಅಂಗನವಾಡಿ ಸಿಬ್ಬಂದಿಗೆ ನಿವೃತ್ತಿ ಹಣ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಮರಣ ಹೊಂದಿದವರಿಗೆ ಪರಿಹಾರ ಧನ ಬಿಡುಗಡೆ ಮಾಡಬೇಕು, ಗುಣಮಟ್ಟದ ಆಹಾರ ಸರಿಯಾಗಿ ಸರಬರಾಜು ಆಗಬೇಕು ಸೇರಿದಂತೆ ಒಟ್ಟು 17 ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ದೊಡ್ಡವ್ವ ಪೂಜೇರಿ, ಕಾರ್ಯದರ್ಶಿ ಮುನೀರಾ ಮುಲ್ಲಾ, ಖಜಾಂಚಿ ಕಲ್ಲಪ್ಪ ಮಾದರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.