<p><strong>ಕಾರವಾರ: </strong>‘ಗೋಹತ್ಯೆ ನಿಷೇಧ ಮತ್ತು ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹಕ್ಕೊತ್ತಾಯ ಮಂಡಿಸಲು ಹಮ್ಮಿಕೊಂಡಿರುವ ಅಭಯ ಗೋಯಾತ್ರೆ ರಾಜ್ಯದಾದ್ಯಂತ ಸಂಚ ರಿಸಲಿದೆ’ ಎಂದು ಭಾರತೀಯ ಗೋ ಪರಿವಾರದ ಕೋಶಾಧ್ಯಕ್ಷ ಮುರಳೀಧರ ಪ್ರಭು ಹೇಳಿದರು.</p>.<p>ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ಮೈದಾನದಲ್ಲಿ ಇದೇ 3ರಂದು ಈ ಯಾತ್ರೆಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಚಾಲನೆ ನೀಡುವರು’ ಎಂದರು.</p>.<p>‘ಶಿವಮೊಗ್ಗದ ಕೂಡ್ಲಿ ಶೃಂಗೇರಿಮಠ ಮಹಾಸಂಸ್ಥಾನದ ಶ್ರೀವಿದ್ಯಾಭಿನವ ವಿದ್ಯಾರಣ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. 30 ಸಾವಿರಕ್ಕೂ ಅಧಿಕ ಗೋ ಪ್ರೇಮಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಭಯಾಕ್ಷರ ಅರ್ಜಿಗಳ ಮೆರವಣಿಗೆ ನಡೆಯಲಿದೆ’ ಎಂದರು.</p>.<p>ಬೆಂಗಳೂರಿನಲ್ಲಿ ಸಮಾರೋಪ: ‘48 ದಿನಗಳ ಈ ಯಾತ್ರೆಯು ರಾಜ್ಯದ 30 ಜಿಲ್ಲೆಗಳಲ್ಲೂ ಸಂಚರಿಸಿ, ಜ. 21ರಂದು ಬೆಂಗಳೂರಿನಲ್ಲಿ ಸಮಾರೋಪ<br /> ಗೊಳ್ಳಲಿದೆ. 4 ಸಾವಿರ ಕಿ.ಮೀ ಸಂಚರಿಸುವ ಈ ಯಾತ್ರೆಯಲ್ಲಿ ರಾಘವೇಶ್ವರ ಶ್ರೀ ಅವರೊಂದಿಗೆ 50 ಮಂದಿ ಗೋ ಪ್ರೇಮಿಗಳು ಜತೆಗೆ ಇರಲಿದ್ದಾರೆ. ಅಲ್ಲದೇ ಆಯಾ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಹಸ್ತಾಕ್ಷರ ಅಭಿಯಾನ: ‘ರಾಜ್ಯದಲ್ಲಿನ ಪ್ರತಿ ಮನೆ ತಲುಪುವ ಅಭಯಾಕ್ಷರ ಅಭಿಯಾನದಲ್ಲಿ ಸುಮಾರು 5 ಕೋಟಿ ಗೂ ಅಧಿಕ ಮಂದಿ ಗೋ ಸಂರಕ್ಷಣೆ ಪರವಾಗಿ ಹಸ್ತಾಕ್ಷರ ನೀಡುವ ನಿರೀಕ್ಷೆಯಿದೆ. ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗೆ ಸಲ್ಲಿಸುವ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 5 ಲಕ್ಷ ಮಂದಿ ಈಗಾಗಲೇ ಸಹಿ ಮಾಡಿದ್ದಾರೆ. ಎಲ್ಲವನ್ನು ಮುಂದಿನ ಮಾರ್ಚ್ ತಿಂಗಳಾಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>‘ಗೋಹತ್ಯೆ ನಿಷೇಧ ಮತ್ತು ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹಕ್ಕೊತ್ತಾಯ ಮಂಡಿಸಲು ಹಮ್ಮಿಕೊಂಡಿರುವ ಅಭಯ ಗೋಯಾತ್ರೆ ರಾಜ್ಯದಾದ್ಯಂತ ಸಂಚ ರಿಸಲಿದೆ’ ಎಂದು ಭಾರತೀಯ ಗೋ ಪರಿವಾರದ ಕೋಶಾಧ್ಯಕ್ಷ ಮುರಳೀಧರ ಪ್ರಭು ಹೇಳಿದರು.</p>.<p>ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ಮೈದಾನದಲ್ಲಿ ಇದೇ 3ರಂದು ಈ ಯಾತ್ರೆಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಚಾಲನೆ ನೀಡುವರು’ ಎಂದರು.</p>.<p>‘ಶಿವಮೊಗ್ಗದ ಕೂಡ್ಲಿ ಶೃಂಗೇರಿಮಠ ಮಹಾಸಂಸ್ಥಾನದ ಶ್ರೀವಿದ್ಯಾಭಿನವ ವಿದ್ಯಾರಣ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. 30 ಸಾವಿರಕ್ಕೂ ಅಧಿಕ ಗೋ ಪ್ರೇಮಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಭಯಾಕ್ಷರ ಅರ್ಜಿಗಳ ಮೆರವಣಿಗೆ ನಡೆಯಲಿದೆ’ ಎಂದರು.</p>.<p>ಬೆಂಗಳೂರಿನಲ್ಲಿ ಸಮಾರೋಪ: ‘48 ದಿನಗಳ ಈ ಯಾತ್ರೆಯು ರಾಜ್ಯದ 30 ಜಿಲ್ಲೆಗಳಲ್ಲೂ ಸಂಚರಿಸಿ, ಜ. 21ರಂದು ಬೆಂಗಳೂರಿನಲ್ಲಿ ಸಮಾರೋಪ<br /> ಗೊಳ್ಳಲಿದೆ. 4 ಸಾವಿರ ಕಿ.ಮೀ ಸಂಚರಿಸುವ ಈ ಯಾತ್ರೆಯಲ್ಲಿ ರಾಘವೇಶ್ವರ ಶ್ರೀ ಅವರೊಂದಿಗೆ 50 ಮಂದಿ ಗೋ ಪ್ರೇಮಿಗಳು ಜತೆಗೆ ಇರಲಿದ್ದಾರೆ. ಅಲ್ಲದೇ ಆಯಾ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಹಸ್ತಾಕ್ಷರ ಅಭಿಯಾನ: ‘ರಾಜ್ಯದಲ್ಲಿನ ಪ್ರತಿ ಮನೆ ತಲುಪುವ ಅಭಯಾಕ್ಷರ ಅಭಿಯಾನದಲ್ಲಿ ಸುಮಾರು 5 ಕೋಟಿ ಗೂ ಅಧಿಕ ಮಂದಿ ಗೋ ಸಂರಕ್ಷಣೆ ಪರವಾಗಿ ಹಸ್ತಾಕ್ಷರ ನೀಡುವ ನಿರೀಕ್ಷೆಯಿದೆ. ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗೆ ಸಲ್ಲಿಸುವ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 5 ಲಕ್ಷ ಮಂದಿ ಈಗಾಗಲೇ ಸಹಿ ಮಾಡಿದ್ದಾರೆ. ಎಲ್ಲವನ್ನು ಮುಂದಿನ ಮಾರ್ಚ್ ತಿಂಗಳಾಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>