<p><strong>ಮೈಸೂರು:</strong> ‘ಒಖಿ’ ಚಂಡಮಾರುತದ ಪರಿಣಾಮ ಕಾವೇರಿ ಕಣಿವೆಯ ಐದು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಭತ್ತ ಮತ್ತು ಕಾಫಿ ಕೊಯ್ಲಿಗೆ ಅಡ್ಡಿಯಾಗಿದೆ.</p>.<p>ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು, ಬಾಳುಗೋಡು, ಶ್ರೀಮಂಗಲ ವ್ಯಾಪ್ತಿಯಲ್ಲಿ ಒಂದು ಗಂಟೆ ಗುಡುಗು ಸಹಿತ ಜೋರು ಮಳೆ ಸುರಿದಿದೆ. ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಕುಶಾಲನಗರ, ಮಡಿಕೇರಿಯಲ್ಲೂ ಸಾಧಾರಣ ಮಳೆಯಾಗಿದೆ. ವೇಗವಾಗಿ ಬೀಸುತ್ತಿರುವ ಗಾಳಿಯಿಂದ ವಿಪರೀತ ಚಳಿಯ ಅನುಭವವಾಗುತ್ತಿದೆ.</p>.<p>ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಶುಕ್ರವಾರ ನಸುಕಿನಿಂದ ಆರಂಭವಾದ ಜಿಟಿಜಿಟಿ ಮಳೆ ಸಂಜೆಯವರೆಗೆ ಬಿಟ್ಟು ಬಿಟ್ಟು ಸುರಿಯಿತು. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ.</p>.<p>ತಮಿಳುನಾಡು ಹಾಗೂ ಕೇರಳಕ್ಕೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹನೂರು, ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತ ವರುಣನ ಅಬ್ಬರ ಜೋರಾಗಿತ್ತು. ಪಿ.ಜಿ.ಪಾಳ್ಯ ಮತ್ತು ಪೊನ್ನಾಚಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಹಾಸನದಲ್ಲಿ ತುಂತುರು ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಒಖಿ’ ಚಂಡಮಾರುತದ ಪರಿಣಾಮ ಕಾವೇರಿ ಕಣಿವೆಯ ಐದು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಭತ್ತ ಮತ್ತು ಕಾಫಿ ಕೊಯ್ಲಿಗೆ ಅಡ್ಡಿಯಾಗಿದೆ.</p>.<p>ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು, ಬಾಳುಗೋಡು, ಶ್ರೀಮಂಗಲ ವ್ಯಾಪ್ತಿಯಲ್ಲಿ ಒಂದು ಗಂಟೆ ಗುಡುಗು ಸಹಿತ ಜೋರು ಮಳೆ ಸುರಿದಿದೆ. ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಕುಶಾಲನಗರ, ಮಡಿಕೇರಿಯಲ್ಲೂ ಸಾಧಾರಣ ಮಳೆಯಾಗಿದೆ. ವೇಗವಾಗಿ ಬೀಸುತ್ತಿರುವ ಗಾಳಿಯಿಂದ ವಿಪರೀತ ಚಳಿಯ ಅನುಭವವಾಗುತ್ತಿದೆ.</p>.<p>ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಶುಕ್ರವಾರ ನಸುಕಿನಿಂದ ಆರಂಭವಾದ ಜಿಟಿಜಿಟಿ ಮಳೆ ಸಂಜೆಯವರೆಗೆ ಬಿಟ್ಟು ಬಿಟ್ಟು ಸುರಿಯಿತು. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ.</p>.<p>ತಮಿಳುನಾಡು ಹಾಗೂ ಕೇರಳಕ್ಕೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಹನೂರು, ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತ ವರುಣನ ಅಬ್ಬರ ಜೋರಾಗಿತ್ತು. ಪಿ.ಜಿ.ಪಾಳ್ಯ ಮತ್ತು ಪೊನ್ನಾಚಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಹಾಸನದಲ್ಲಿ ತುಂತುರು ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>