ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯ ಕಾಲುವೆಗಳು ಹಾಗೂ ಸಿಂಧನೂರು, ಗೊರೇಬಾಳ ಮತ್ತು ಪೋತ್ನಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಆದಾಗ್ಯೂ ಕೆಳ ಭಾಗದ ರೈತರ ಬೆಳೆಗೆ ನೀರು ಲಭ್ಯವಾಗುತ್ತಿಲ್ಲ. ಮೇಲ್ಭಾಗದಲ್ಲಿ ಕೆಲವರು ಅಕ್ರಮವಾಗಿ ನೀರು ಪಡೆಯುತ್ತಿದ್ದಾರೆ’ ಎಂದರು.