ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ ಸೋಂಕಿತರ ನಿರ್ಲಕ್ಷ್ಯ ಬೇಡ

Last Updated 2 ಡಿಸೆಂಬರ್ 2017, 7:33 IST
ಅಕ್ಷರ ಗಾತ್ರ

ದೇವನಹಳ್ಳಿ: ಸಮಾಜದಲ್ಲಿರುವ ಎಚ್‌ಐವಿ ಸೋಂಕಿತರ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಪುರಸಭೆ ಮುಖ್ಯಾಧಿಕಾರಿ ಅಂಬಿಕಾ ಅಭಿಪ್ರಾಯ ಪಟ್ಟರು. ಇಲ್ಲಿನ ಹೊಸ ಬಸ್ ನಿಲ್ದಾಣದಲ್ಲಿ ಡಾ.ಬಿಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಯುವಕರ ಸಂಘ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಮಾಜದಲ್ಲಿ ಸೋಂಕಿತರನ್ನು ಅತ್ಯಂತ ಕೀಳಾಗಿ ನೋಡುವ ಪ್ರವೃತ್ತಿ ಬದಲಾಗಬೇಕು. ಅವರು ಸಾಮಾನ್ಯ ಮನುಷ್ಯರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಸೋಂಕಿನ ಮೂಲ ಯಾವುದೆಂಬುದರ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಆಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಸೋಂಕು ಹೆಚ್ಚು ಹರಡುತ್ತದೆ. ಇದರಲ್ಲಿ ಹದಿಹರೆಯದವರ ಪಾಲು ಹೆಚ್ಚು ಎಂದರು.

ದೇಹದಲ್ಲಿನ ರೋಗಗಳ ವಿರುದ್ಧ ಕ್ರಿಯಾತ್ಮಕವಾಗಿ ಕೆಲಸ ಮಾಡುವ ರೋಗನಿರೋಧಕ ಶಕ್ತಿ ಕುಂದಿಸುವ ಸೋಂಕನ್ನು ಸರ್ವನಾಶ ಮಾಡಲು ಸಾಧ್ಯವಾಗದಿದ್ದರೂ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅತಿ ಮುಖ್ಯವಾಗಿದೆ. ಜತೆಗೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.

ಡಾ.ಬಿಆರ್.ಅಂಬೇಡ್ಕರ್ ಯುವಕರ ಶಕ್ತಿ ಸಂಘ ರಾಜ್ಯ ಘಟಕದ ಅಧ್ಯಕ್ಷ ಎಂ ಮೂರ್ತಿ ಮಾತನಾಡಿ, ಸೋಂಕಿತರೊಂದಿಗೆ ಲೈಂಗಿಕ ಕ್ರಿಯೆ ಹೊರತು ಪಡಿಸಿದರೆ ಮುಟ್ಟುವುದರಿಂದ, ಜತೆಯಲ್ಲಿ ಉಪಾಹಾರ ಸೇವಿಸುವುದರಿಂದ ಸೋಂಕು ಹರಡುವುದಿಲ್ಲ. ಸಮಾಜದಲ್ಲಿರುವ ಪ್ರತಿಯೊಬ್ಬರನ್ನು ಮಾನವೀಯತೆಯಿಂದ ಕಾಣಬೇಕು ಎಂದರು.

ಏಡ್ಸ್‌ ಆಪ್ತ ಸಮಾಲೋಚಕಿ ರೇಖಾ ಮಾತನಾಡಿದರು. ಪುರಸಭೆ ಆರೋಗ್ಯ ನಿರೀಕ್ಷಕಿ ಬಿಜಿ, ಪುರಸಭೆ ಸದಸ್ಯ ಜಿ.ಎನ್‌.ವೇಣುಗೋಪಾಲ್‌, ಮುಖಂಡರಾದ ಕುಮಾರ್‌ ಭಾಗವಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಏಡ್ಸ್‌ ರೋಗಕ್ಕೆ ಬಲಿಯಾದ ವೀಣಾಧರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT