ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನ ವಿವಿಧೆಡೆಗಳಲ್ಲಿ ಶುಕ್ರವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಹೊರವಲಯದ ಬೂರಗಮಾಕಲಹಳ್ಳಿಯ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಹೋಮ, ಹವನ ಸಂಭ್ರಮದಿಂದ ನೆರವೇರಿದವು. ಸ್ವಾಮಿಗೆ ಮಾಡಿದ್ದ ಸುವರ್ಣ ಅಲಂಕಾರ ಭಕ್ತರ ಗಮನಸೆಳೆಯಿತು. ವರದಾದ್ರಿ ಬೆಟ್ಟದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಕಡಲೆಕಾಯಿ ಜಾತ್ರೆ ನಡೆಯಿತು. ದೇವಾಲಯ ಹಾಗೂ ಬೆಟ್ಟ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿತ್ತು.