ಈ ಕುರಿತು ಅರಣ್ಯ ಇಲಾಖೆ ಅಧಿಕಾರಿ ಕೃಷ್ಣ ಅವರನ್ನು ಪ್ರಶ್ನಿಸಿದರೆ, ‘ಸೋನಗಾನಹಳ್ಳಿ ಎಮ್ಮೆಗುಟ್ಟೆ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದಿರುವ ಮರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.ಮರ ಕಡಿದಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳೀಯರೆ ಈ ಕೃತ್ಯ ನಡೆಸುತ್ತಿರುವುದು ತಿಳಿದು ಬಂದಿದೆ. ಶೀಘ್ರದಲ್ಲೇ ಅವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು’ ಎಂದು ತಿಳಿಸಿದರು.