ತಿರುವನಂತಪುರಂ: ಕೇರಳದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ ಒಖಿ ಚಂಡಮಾರುತದ ಅಬ್ಬರಕ್ಕೆ ಶನಿವಾರ 7 ಮಂದಿ ಸಾವಿಗೀಡಾಗಿದ್ದಾರೆ. ಸಮುದ್ರದಲ್ಲಿ ಕಾಣೆಯಾದವರಲ್ಲಿ 450 ಮಂದಿಯನ್ನು ರಕ್ಷಿಸಲಾಗಿದೆ. ಆದರೆ ನೂರಕ್ಕಿಂತಲೂ ಹೆಚ್ಚು ಮೀನುಗಾರರರು ನಾಪತ್ತೆಯಾಗಿದ್ದು ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಪತ್ತೆಯಾದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ಭರದಿಂದ ಸಾಗಿದೆ. ಭಾರಿ ಮಳೆಯಿಂದಾಗಿ ಉಂಟಾದ ಅನಾಹುತದಲ್ಲಿ ಸಾವಿಗೀಡಾದವರ ಸಂಖ್ಯೆ 14 ಆಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.