<p><strong>ಚಿತ್ರದುರ್ಗ:</strong> ‘ನನ್ನ ರಾಜೀನಾಮೆಯಿಂದ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸಿಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧ ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಎಚ್. ಆಂಜನೇಯ ಭರವಸೆ ನೀಡಿದರು.</p>.<p>ಮಾದಿಗ ಜನಾಂಗಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾರ್ಯಕರ್ತರನ್ನು ಶನಿವಾರ ನಗರದ ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಭೇಟಿಯಾಗಿ ಅವರು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಒಳಮೀಸಲಾತಿಗೆ ಶಿಫಾರಸು ಮಾಡಲು ಅಸಹಾಯಕರಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು ಎಂದು ಹೋರಾಟಗಾರರು ಕೇಳುತ್ತಿದ್ದಾರೆ. ಇದರಲ್ಲಿ ಅಸಹಾಯಕತೆಯ ಪ್ರಶ್ನೆಯೇ ಇಲ್ಲ. ರಾಜೀನಾಮೆಯಿಂದ ಅನುಕೂಲವಾಗುತ್ತದೆ, ಹೋರಾಟಗಾರರಿಗೆ ಸಮಾಧಾನವಾಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧನಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಸದಾಶಿವ ವರದಿ ಅನುಷ್ಠಾನದಿಂದ ಭೋವಿ, ಲಂಬಾಣಿ, ಕೊರಚ ಜನಾಂಗವನ್ನು ಪರಿಶಿಷ್ಟ ಜಾತಿಯಿಂದ ಹೊರ ಹಾಕಲಾಗುತ್ತದೆ ಎಂಬ ತಪ್ಪು ಮಾಹಿತಿಯಿಂದಾಗಿ, ಆ ಸಮುದಾಯದವರು ಒಳಮೀಸಲಾತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ ಪ್ರಕಾರ ಯಾವುದೇ ಆಯೋಗಕ್ಕಾಗಲಿ, ರಾಜ್ಯ ಸರ್ಕಾರಕ್ಕಾಗಲಿ ಒಂದು ಜಾತಿಯನ್ನು ಸೇರಿಸುವ ಅಥವಾ ತೆಗೆಯುವುದಕ್ಕೆ ಅಧಿಕಾರ ಇರುವುದಿಲ್ಲ. ಕೇಂದ್ರ ನೀಡುವ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವುದಷ್ಟೇ ನಮ್ಮ ಕೆಲಸ. ಹಾಗಾಗಿ ಈ ವಿಚಾರದಲ್ಲಿ ಆ ಸಮುದಾಯದವರು ಭಯಪಡಬೇಕಾಗಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ನನ್ನ ರಾಜೀನಾಮೆಯಿಂದ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸಿಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧ ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಎಚ್. ಆಂಜನೇಯ ಭರವಸೆ ನೀಡಿದರು.</p>.<p>ಮಾದಿಗ ಜನಾಂಗಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಕಾರ್ಯಕರ್ತರನ್ನು ಶನಿವಾರ ನಗರದ ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ಭೇಟಿಯಾಗಿ ಅವರು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಒಳಮೀಸಲಾತಿಗೆ ಶಿಫಾರಸು ಮಾಡಲು ಅಸಹಾಯಕರಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು ಎಂದು ಹೋರಾಟಗಾರರು ಕೇಳುತ್ತಿದ್ದಾರೆ. ಇದರಲ್ಲಿ ಅಸಹಾಯಕತೆಯ ಪ್ರಶ್ನೆಯೇ ಇಲ್ಲ. ರಾಜೀನಾಮೆಯಿಂದ ಅನುಕೂಲವಾಗುತ್ತದೆ, ಹೋರಾಟಗಾರರಿಗೆ ಸಮಾಧಾನವಾಗುತ್ತದೆ ಎನ್ನುವುದಾದರೆ ಅದಕ್ಕೂ ಸಿದ್ಧನಿದ್ದೇನೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಸದಾಶಿವ ವರದಿ ಅನುಷ್ಠಾನದಿಂದ ಭೋವಿ, ಲಂಬಾಣಿ, ಕೊರಚ ಜನಾಂಗವನ್ನು ಪರಿಶಿಷ್ಟ ಜಾತಿಯಿಂದ ಹೊರ ಹಾಕಲಾಗುತ್ತದೆ ಎಂಬ ತಪ್ಪು ಮಾಹಿತಿಯಿಂದಾಗಿ, ಆ ಸಮುದಾಯದವರು ಒಳಮೀಸಲಾತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ ಪ್ರಕಾರ ಯಾವುದೇ ಆಯೋಗಕ್ಕಾಗಲಿ, ರಾಜ್ಯ ಸರ್ಕಾರಕ್ಕಾಗಲಿ ಒಂದು ಜಾತಿಯನ್ನು ಸೇರಿಸುವ ಅಥವಾ ತೆಗೆಯುವುದಕ್ಕೆ ಅಧಿಕಾರ ಇರುವುದಿಲ್ಲ. ಕೇಂದ್ರ ನೀಡುವ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವುದಷ್ಟೇ ನಮ್ಮ ಕೆಲಸ. ಹಾಗಾಗಿ ಈ ವಿಚಾರದಲ್ಲಿ ಆ ಸಮುದಾಯದವರು ಭಯಪಡಬೇಕಾಗಿಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>