ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಸುರಿಯುತ್ತಿರುವ ತುಂತುರು ಮಳೆ ರೈತರಲ್ಲಿ ಆತಂಕ ಮೂಡಿಸಿದೆ. ರಾಗಿ, ಭತ್ತ ಕೊಯ್ಲು ಸಾಧ್ಯವಾಗದೆ ಆತಂಕಕ್ಕೆ ಒಳಾಗಿದ್ದಾರೆ. ಅಲಸಂದೆ, ಅವರೆ ಸೇರಿ ಇತರೆ ಬೆಳೆಗಳ ಒಕ್ಕಣೆಯಲ್ಲಿದ್ದ ರೈತರು ಪರದಾಡುವಂತಾಗಿದೆ. ರಾವಂದೂರು ಹೋಬಳಿಯಲ್ಲಿ 13 ಮಿ.ಮೀ, ಬೆಟ್ಟದಪುರದಲ್ಲಿ 9 ಮಿ.ಮೀ, ಹಾರನಹಳ್ಳಿಯಲ್ಲಿ 8 ಮಿ.ಮೀ, ಕಸಬಾ ಹೋಬಳಿಯಲ್ಲಿ 8 ಮಿ.ಮೀ ಮಳೆಯಾಗಿದೆ.