‘ಇದರಿಂದ ಕೃಷ್ಣಾ ಅಚ್ಚಕಟ್ಟು ಪ್ರದೇಶದ ಎಸ್ಬಿಸಿ, ಎಂಬಿಸಿ, ಜೆಬಿಸಿ ವ್ಯಾಪ್ತಿಯ ರೈತರಿಗೆ ಹಿಂಗಾರು ಬೆಳೆಗೆ ನೀರಿಲ್ಲದಂತಾಗುತ್ತದೆ. ಈಗಾಗಲೇ ಸುರಪುರ, ಜೇವರ್ಗಿ, ಯಾದಗಿರಿ, ದೇವದುರ್ಗ ಕ್ಷೇತ್ರದ ಶಾಸಕರ ಗಮನಕ್ಕೆ ತರಲಾಗಿದೆ. ನಮ್ಮ ಪಾಲಿನ ನೀರನ್ನು ಕಸಿದುಕೊಂಡರೆ ಮುಂದಿನ ವಾರದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದರು.