ಮರಗಳನ್ನು ಕಿತ್ತುಹಾಕಿರುವ ಕುರಿತು ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ ಅವರನ್ನು ದೂರವಾಣಿಯ ಮೂಲಕ ಸಂಪರ್ಕ ಮಾಡಿದಾಗ, ‘ಶಾಸಕರ ಸೂಚನೆಯಂತೆ ಮೈದಾನದಲ್ಲಿ ಸ್ವಚ್ಛತೆ ಮಾಡಲು ನಮ್ಮ ಸಿಬ್ಬಂದಿ ತೆರಳಿದ್ದರು. ಈ ವೇಳೆಸ್ಥಳೀಯ ಯುವಕರು ಅಡ್ಡಿ ಪಡಿಸಿದ್ದರಿಂದ ಸಿಬ್ಬಂದಿ ವಾಪಸ್ ಬಂದಿದ್ದಾರೆ. ಮರಗಳನ್ನು ಯಾರು ಕಿತ್ತು ಹಾಕಿದ್ದಾರೆಂದು ನಮಗೆ ಗೊತ್ತಿಲ್ಲವೆಂದು ಹೇಳುತ್ತಿದ್ದಾರೆ’ ಎಂದರು.