ಕುಮಟಾ ಪಟ್ಟಣಕ್ಕೆ ಒಳಚರಂಡಿ ಯೋಜನೆಗಾಗಿ ಸರಿಯಾಗಿದ್ದ ರಸ್ತೆಯನ್ನು ಅಗೆದು ಹಾಕಿ ಕಾಮಗಾರಿ ನಡೆಸಲಾಗಿತ್ತು. ಪ್ರವಾಸಿ ಮಂದಿರ ರಸ್ತೆಯ ಮಧ್ಯೆ ಅಲ್ಲಲ್ಲಿ ಒಳ ಚರಂಡಿ ಚೇಂಬರ್ ನಿರ್ಮಾಣಕ್ಕಾಗಿ ಗುಂಡಿ ತೋಡಿ ನಂತರ ಸರಿ ಮಾಡಿದ್ದರೂ ರಸ್ತೆಯ ಉಬ್ಬು–ತಗ್ಗುಗಳು ಹಾಗೇ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸಿ ಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿಯಿಂದ ಸಾಗುವ ಪ್ರವಾಸಿ ಮಂದಿರ ರಸ್ತೆಯನ್ನು ದುರಸ್ತಿಗೊಳಿಸಲಾಗಿದೆ.