ಕಾಂಗ್ರೆಸ್ನ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮುಖಂಡರು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಇತರ ಮುಖ್ಯಮಂತ್ರಿಗಳಾದ ಅಮರೀಂದರ್ ಸಿಂಗ್, ವಿ.ನಾರಾಯಣ ಸ್ವಾಮಿ, ವಿವಿಧ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದ ಹಲವು ಮುಖಂಡರು ಸೋಮವಾರ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸೇರಿ ರಾಹುಲ್ ಪರವಾಗಿ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.