ಉಳ್ಳಾಲ: ಒಖಿ ಚಂಡಮಾರುತದ ಪ್ರಭಾವಕ್ಕೆ ಇಲ್ಲಿನ ಸಮುದ್ರದ ಉಬ್ಬರದಿಂದ ಸೋಮೇಶ್ವರ, ಉಳ್ಳಾಲ, ಉಚ್ಚಿಲ, ಮೊಗವೀರಪಟ್ನ, ಖಿಲಿರಿಯಾನಗರ ಮುಂತಾದ ಪ್ರದೇಶಗಳಲ್ಲಿ ಶನಿವಾರ ರಾತ್ರಿ 9 ರಿಂದ ಭಾನುವಾರ ನಸುಕಿನ 3 ಗಂಟೆಯವರೆಗೆ ಅಲೆಗಳ ಅಬ್ಬರ ಹೆಚ್ಚಾಗಿತ್ತು. ಗಡಿ ಪ್ರದೇಶ ತಲಪಾಡಿಯಿಂದ ಉಳ್ಳಾಲದವರೆಗೆ ಸಮುದ್ರ ತೀರದಲ್ಲಿ ನೆಲೆಸಿದ್ದ ಸುಮಾರು 80 ಕುಟುಂಬಗಳನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.