ಇಲ್ಲಿಗೆ ಬರುವ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸ್ಥಳವಿಲ್ಲದೆ ಪರದಾಡುವಂತಾಗಿದೆ. ಜಮಖಂಡಿ, ಅಥಣಿ, ವಿಜಯಪುರ, ಮಹಾರಾಷ್ಟ್ರದ ಜತ್ತ, ಗುಡ್ಡಾಪುರಕ್ಕೆ ಹೋಗುವ ಬಸ್ಗಳು ಇಲ್ಲಿಗೆ ಬಂದು ಹೋಗುತ್ತವೆ. ಹೀಗಾಗಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಭೇಟಿ ನೀಡುತ್ತಾರೆ. ಬಸ್ಗಳಿಗಾಗಿ ಬಿಸಿಲಿನಲ್ಲಿಯೇ ನಿಲ್ಲಬೇಕಾಗುತ್ತದೆ ಎಂದು ನಾಗರಿಕರು ದೂರುತ್ತಾರೆ.