ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಭೀಮಾ ತೀರದ ಹಂತಕ ಚಂದಪ್ಪ ಹರಿಜನನ ಸಹಚರರಾದ ಮಲ್ಲಿಕಾರ್ಜುನ, ಅರ್ಜುನ ಸೇರಿ 9 ಜನರ ಬಂಧನ

Last Updated 4 ಡಿಸೆಂಬರ್ 2017, 8:50 IST
ಅಕ್ಷರ ಗಾತ್ರ

ಕಲಬುರ್ಗಿ: ಭೀಮಾ ತೀರದ ಹಂತಕ ಚಂದಪ್ಪ ಹರಿಜನನ ಇಬ್ಬರು ಸಹಚರರು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿರುವ ಕಲಬುರ್ಗಿ ಪೊಲೀಸರು ಅವರಿಂದ 20 ನಾಡ ಪಿಸ್ತೂಲ್‌ ಹಾಗೂ 54 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

‘ಬಂಧಿತರಲ್ಲಿ ಮಲ್ಲಿಕಾರ್ಜುನ ಮತ್ತು ಅರ್ಜುನ ಎಂಬಿಬ್ಬರು ಭೀಮಾ ತೀರದ ಹಂತಕ ಚಂದಪ್ಪ ಹರಿಜನನ ಸಹಚರರು. ಇವರು ಭೀಮಾ ತೀರದ ಅಫಜಲಪುರ ಭಾಗದಲ್ಲಿ ಇನ್ನೂ ಅಪರಾಧಿಕ ಚಟುವಟಿಕೆಯಲ್ಲಿ ತೊಡಗಿದ್ದರು’ ಎಂದು ಐಜಿಪಿ ಅಲೋಕಕುಮಾರ್‌ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಕ್ರಮ ನಾಡ ಪಿಸ್ತೂಲ್‌ಗಳು ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶಗಳಿಂದ ಪೂರೈಕೆಯಾಗುತ್ತಿವೆ. ಮಧ್ಯಪ್ರದೇಶದಲ್ಲಿ ಅಕ್ರಮ ನಾಡ ಪಿಸ್ತೂಲ್‌ ತಯಾರಿಕೆ ಗುಡಿ ಕೈಗಾರಿಕೆಯ ಮಾದರಿಯಲ್ಲಿ ನಡೆಯುತ್ತಿದೆ. ಅಲ್ಲಿಂದ ನಮ್ಮ ರಾಜ್ಯಕ್ಕೆ ಇವು ಪೂರೈಕೆಯಾಗುವುದನ್ನು ತಡೆಯಲು ಕಲಬುರ್ಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಶಿಕುಮಾರ್‌ ನೇತೃತ್ವದ ತಂಡವನ್ನು ಅಲ್ಲಿಗೆ ಕಳಿಸಲಾಗುವುದು ಎಂದರು.

₹1 ಲಕ್ಷ ನಗದು ಬಹುಮಾನ

ಈ ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ತಂಡಕ್ಕೆ ₹1 ಲಕ್ಷ ನಗದು ಬಹುಮಾನ ನೀಡಿದ ಅವರು, ಮುಖ್ಯಮಂತ್ರಿಗಳ ಪದಕಕ್ಕೆ ಕಲಬುರ್ಗಿಯ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ್‌ ಅವರ ಹೆಸರು ಶಿಫಾರಸು ಮಾಡುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT