ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸು ಆಮದು ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

Last Updated 4 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ವಿಯೆಟ್ನಾಂನಿಂದ ಕಳಪೆ ಗುಣಮಟ್ಟದ ಮೆಣಸು ಆಮದು ಆಗುತ್ತಿರುವುದರಿಂದ ರಾಜ್ಯದ ಮೆಣಸು ಬೆಳೆಗಾರರಿಗೆ ತೀವ್ರ ನಷ್ಟವಾಗುತ್ತಿದೆ. ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಸುರೇಶ ಪ್ರಭು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮನವಿ ಮಾಡಿದರು.

ಮೆಣಸು ಆಮದಿನಿಂದಾಗಿ ಬೆಲೆ ಕುಸಿದಿದೆ. ಇದರಿಂದ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ವಿಯೆಟ್ನಾಂನ ಮೆಣಸು ಶ್ರೀಲಂಕಾ ಮೂಲಕ ಭಾರತಕ್ಕೆ ಅಕ್ರಮವಾಗಿಯೂ ಆಮದು ಆಗುತ್ತಿದ್ದು, ಕೂಡಲೇ ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.

ರಾಜ್ಯದಲ್ಲಿ ಉತ್ಕೃಷ್ಟ ಗುಣಮಟ್ಟದ ಮೆಣಸನ್ನು ಬೆಳೆಯಲಾಗುತ್ತಿದೆ. ಬೆಲೆ ಕುಸಿದಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ಮೆಣಸಿನ ಆಮದನ್ನು ನಿಷೇಧಿಸುವ ಮೂಲಕ ಸ್ಥಳೀಯ ರೈತರ ನೆರವಿಗೆ ಧಾವಿಸಬೇಕು ಎಂದೂ ಅವರು ಆಗ್ರಹಿಸಿದರು.

ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ ಪ್ರಭು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT