ಶಿವಮೊಗ್ಗದ ಅರ್ಧಕ್ಕಿಂತ ಹೆಚ್ಚು ವಾರ್ಡ್ಗಳು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸೇರ್ಪಡೆಯಾಗಿಲ್ಲ. ವಾರ್ಡ್ಗಳ ಆಯ್ಕೆ ಹಾಗೂ ಉದ್ಯಾನ, ಕೆರೆ, ಆಟದ ಮೈದಾನ ಮತ್ತು ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳದೆ ಅಂತಿಮಗೊಳಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ ಪ್ರಥಮ ಹಂತದ ಅಭಿವೃದ್ಧಿಯಲ್ಲಿ ಪ್ರಭಾವಿ ಜನಪ್ರತಿನಿಧಿಗಳ ಕ್ಷೇತ್ರದ ಉದ್ಯಾನಗಳ ಆಯ್ಕೆಯ ಹಿಂದೆ ರಾಜಕೀಯ ಷಡ್ಯಂತ್ರವೇ ಅಡಗಿದೆ ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ ಎಂದು ದೂರಿದರು.