ಶೀಘ್ರವೇ ಅಭ್ಯರ್ಥಿಗಳ ಘೋಷಣೆ: ‘ಜೆಡಿಎಸ್ ರಾಷ್ಟ್ರ ಘಟಕದ ಅಧ್ಯಕ್ಷ ದೇವೆಗೌಡರು ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಜಿಲ್ಲಾ ಪ್ರವಾಸದ ನಿಮಿತ್ತ ಇಲ್ಲಿಗೆ ಶೀಘ್ರವೇ ಆಗಮಿಸಲಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಸದ್ಯದಲ್ಲಿಯೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಈವರೆಗೂ ಬಗೆಹರಿಸಲಾಗದ ಇಲ್ಲಿನ ಕುಡಿಯುವ ನೀರು, ರಸ್ತೆ ಸೇರಿದಂತೆ ಇನ್ನಿತರ ಸಮ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಲಾಗುವುದು’ ಎಂದು ಹೇಳಿದರು. ಜೆಡಿಎಸ್ ಮುಖಂಡರಾದ ಪ್ರದೀಪ ಶೇಜವಾಡಕರ್, ಖಲೀಲುಲ್ಲಾ ಶೇಖ್, ಶಂಕರ್ ಇದ್ದರು.