<p><strong>ಚಿಕ್ಕಮಗಳೂರು: </strong>ನಗರದ ಗೃಹ ಮಂಡಳಿ ಬಡಾವಣೆ (ಕೆ.ಎಂ ರಸ್ತೆ) ಕಾಬ್ ಸೆಟ್ ಬಳಿ ಪ್ರಗತಿಯಲ್ಲಿರುವ ಜಿಲ್ಲಾ ಕಚೇರಿ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮತ್ತು ಶಾಸಕ ಸಿ.ಟಿ.ರವಿ ಸೋಮವಾರ ಪರಿಶೀಲಿಸಿದರು.</p>.<p>ಈ ಸಂಕೀರ್ಣದಲ್ಲಿ 30 ಇಲಾಖೆಗಳ ಕಚೇರಿಗಳು ಬರಲಿವೆ. ಒಟ್ಟು ₹ 25 ಕೋಟಿ ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗೆ 18 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಅಕ್ಟೋಬರ್ನಲ್ಲಿ ಕೆಲಸ ಆರಂಭವಾಗಿದೆ. ಕಾಮಗಾರಿ ನಿರ್ವಹಣೆಯನ್ನು ಗೃಹ ಮಂಡಳಿಗೆ ವಹಿಸಲಾಗಿದೆ. ‘ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಸಿ.ಟಿ.ರವಿ ಅವರು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ‘ಈ ಜಾಗ ಸ್ವಲ್ಪ ದೂರವಾಯಿತು ಎಂಬುದು ನಿಜ. ರೈಲು ನಿಲ್ದಾಣದ ಬಳಿ ನಿರ್ಮಿಸಬೇಕು ಎಂಬ ಬಗ್ಗೆ ಈ ಹಿಂದೆ ಚರ್ಚೆಯಾಗಿತ್ತು. ಜಿಲ್ಲಾ ಪಂಚಾಯಿತಿ, ಆರ್ಟಿಒ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೊದಲಾದವು ಈ ಭಾಗದಲ್ಲಿ ಇವೆ. ಆದರೆ, ಬೇರೆ ಕಡೆ ಸರ್ಕಾರಿ ಜಾಗ ಇಲ್ಲದಿದ್ದರಿಂದ ಈ ಜಾಗ ಗುರುತಿಸಲಾಯಿತು. ಇಲ್ಲಿ 100 ಎಕರೆಗೂ ಹೆಚ್ಚು ಸರ್ಕಾರಿ ಜಾಗ ಇದೆ’ ಎಂದರು.</p>.<p>‘ಚಿಕ್ಕಮಗಳೂರಿನಲ್ಲಿ ಮಳೆ ಜಾಸ್ತಿ. ಇಲ್ಲಿ ಕಟ್ಟಡಕ್ಕೆ ಸ್ಲೊಪ್ ರೂಫಿಂಗ್ ಮಾಡುವುದು ಸರಿ. ಈ ಕಟ್ಟಡದ ನೀಲನಕ್ಷೆಯಲ್ಲಿ ಫ್ಲಾಟ್ ರೂಫಿಂಗ್ ಇದೆ. ಮುಖ್ಯಎಂಜಿನಿಯರ್ ಅವರೊಂದಿಗೆ ಚರ್ಚಸಿ, ಸ್ಲೋಪ್ ರೂಫಿಂಗ್ಗೆ ಬದಲಾಯಿಸಿಕೊಳ್ಳುವಂತೆ ಸಲಹೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಇಲ್ಲಿಗೆ ಕಚೇರಿಗಳು ಸ್ಥಳಾಂತರವಾದ ನಂತರ, ಈಗಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಜಿಲ್ಲೆಯ ಇತಿಹಾಸ, ಸಮಗ್ರ ಮಾಹಿತಿಯ ಜಿಲ್ಲಾ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಬೇಕು ಎಂಬ ಸಲಹೆಗಳು ವ್ಯಕ್ತವಾಗಿವೆ. ಅರ್ಜಿ ಸ್ವೀಕೃತಿ ವಿಭಾಗವು ಈಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುತ್ತದೆ’ ಎಂದು ತಿಳಿಸಿದರು.</p>.<p>‘ದತ್ತ ಜಯಂತಿಯಂದು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಿಂದ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಮುಂಜಾಗ್ರತೆ ಕ್ರಮದಿಂದಾಗಿ ಪರಿಸ್ಥಿತಿ ಹತೋಟಿಗೆ ಬಂದಿದೆ’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.</p>.<p>‘ನಗರದ ತಮಿಳು ಕಾಲೋನಿ ಭಾಗದಲ್ಲಿ ಡಿ.3ರಂದು ರಾತ್ರಿ ಪೊಲೀಸರು ಏಳು ಪೆಟ್ರೋಲ್ ಬಾಂಬ್ಗಳು, ರಾಡು, ಲಾಂಗ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಲಾಟೆಗೆ ಸಂಚು ರೂಪಿಸಿದ್ದ 33 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ’ ಎಂದರು.</p>.<p>‘ಕರಾವಳಿ ಭಾಗದ ಸಂಘಟನೆಗಳೊಂದಿಗೆ ಸಂಪರ್ಕ ಇರುವವರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಪೊಲೀಸ್ ಬಾತ್ಮಿದಾರರಿಂದ ನನಗೆ ಗೊತ್ತಾಗಿದೆ. ಈ ವಿಷಯನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ’ ಎಂದು ಹೇಳಿದರು. ‘ಜನತೆ ವದಂತಿಗಳಿಗೆ ಕಿವಿಗೊಡಬಾರದು. ಪ್ರಚೋದನೆಗೆ ಒಳಗಾಗಬಾರದು. ಶಾಂತಿಸುವ್ಯವಸ್ಥೆ ಕಾಪಾಡಲು ಜನರು ನೆರವಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ನಗರದ ಗೃಹ ಮಂಡಳಿ ಬಡಾವಣೆ (ಕೆ.ಎಂ ರಸ್ತೆ) ಕಾಬ್ ಸೆಟ್ ಬಳಿ ಪ್ರಗತಿಯಲ್ಲಿರುವ ಜಿಲ್ಲಾ ಕಚೇರಿ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮತ್ತು ಶಾಸಕ ಸಿ.ಟಿ.ರವಿ ಸೋಮವಾರ ಪರಿಶೀಲಿಸಿದರು.</p>.<p>ಈ ಸಂಕೀರ್ಣದಲ್ಲಿ 30 ಇಲಾಖೆಗಳ ಕಚೇರಿಗಳು ಬರಲಿವೆ. ಒಟ್ಟು ₹ 25 ಕೋಟಿ ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗೆ 18 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಅಕ್ಟೋಬರ್ನಲ್ಲಿ ಕೆಲಸ ಆರಂಭವಾಗಿದೆ. ಕಾಮಗಾರಿ ನಿರ್ವಹಣೆಯನ್ನು ಗೃಹ ಮಂಡಳಿಗೆ ವಹಿಸಲಾಗಿದೆ. ‘ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಸಿ.ಟಿ.ರವಿ ಅವರು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ‘ಈ ಜಾಗ ಸ್ವಲ್ಪ ದೂರವಾಯಿತು ಎಂಬುದು ನಿಜ. ರೈಲು ನಿಲ್ದಾಣದ ಬಳಿ ನಿರ್ಮಿಸಬೇಕು ಎಂಬ ಬಗ್ಗೆ ಈ ಹಿಂದೆ ಚರ್ಚೆಯಾಗಿತ್ತು. ಜಿಲ್ಲಾ ಪಂಚಾಯಿತಿ, ಆರ್ಟಿಒ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮೊದಲಾದವು ಈ ಭಾಗದಲ್ಲಿ ಇವೆ. ಆದರೆ, ಬೇರೆ ಕಡೆ ಸರ್ಕಾರಿ ಜಾಗ ಇಲ್ಲದಿದ್ದರಿಂದ ಈ ಜಾಗ ಗುರುತಿಸಲಾಯಿತು. ಇಲ್ಲಿ 100 ಎಕರೆಗೂ ಹೆಚ್ಚು ಸರ್ಕಾರಿ ಜಾಗ ಇದೆ’ ಎಂದರು.</p>.<p>‘ಚಿಕ್ಕಮಗಳೂರಿನಲ್ಲಿ ಮಳೆ ಜಾಸ್ತಿ. ಇಲ್ಲಿ ಕಟ್ಟಡಕ್ಕೆ ಸ್ಲೊಪ್ ರೂಫಿಂಗ್ ಮಾಡುವುದು ಸರಿ. ಈ ಕಟ್ಟಡದ ನೀಲನಕ್ಷೆಯಲ್ಲಿ ಫ್ಲಾಟ್ ರೂಫಿಂಗ್ ಇದೆ. ಮುಖ್ಯಎಂಜಿನಿಯರ್ ಅವರೊಂದಿಗೆ ಚರ್ಚಸಿ, ಸ್ಲೋಪ್ ರೂಫಿಂಗ್ಗೆ ಬದಲಾಯಿಸಿಕೊಳ್ಳುವಂತೆ ಸಲಹೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>‘ಇಲ್ಲಿಗೆ ಕಚೇರಿಗಳು ಸ್ಥಳಾಂತರವಾದ ನಂತರ, ಈಗಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಜಿಲ್ಲೆಯ ಇತಿಹಾಸ, ಸಮಗ್ರ ಮಾಹಿತಿಯ ಜಿಲ್ಲಾ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಬೇಕು ಎಂಬ ಸಲಹೆಗಳು ವ್ಯಕ್ತವಾಗಿವೆ. ಅರ್ಜಿ ಸ್ವೀಕೃತಿ ವಿಭಾಗವು ಈಗಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುತ್ತದೆ’ ಎಂದು ತಿಳಿಸಿದರು.</p>.<p>‘ದತ್ತ ಜಯಂತಿಯಂದು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಿಂದ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಮುಂಜಾಗ್ರತೆ ಕ್ರಮದಿಂದಾಗಿ ಪರಿಸ್ಥಿತಿ ಹತೋಟಿಗೆ ಬಂದಿದೆ’ ಎಂದು ಶಾಸಕ ಸಿ.ಟಿ.ರವಿ ಹೇಳಿದರು.</p>.<p>‘ನಗರದ ತಮಿಳು ಕಾಲೋನಿ ಭಾಗದಲ್ಲಿ ಡಿ.3ರಂದು ರಾತ್ರಿ ಪೊಲೀಸರು ಏಳು ಪೆಟ್ರೋಲ್ ಬಾಂಬ್ಗಳು, ರಾಡು, ಲಾಂಗ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಲಾಟೆಗೆ ಸಂಚು ರೂಪಿಸಿದ್ದ 33 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಗೊತ್ತಾಗಿದೆ’ ಎಂದರು.</p>.<p>‘ಕರಾವಳಿ ಭಾಗದ ಸಂಘಟನೆಗಳೊಂದಿಗೆ ಸಂಪರ್ಕ ಇರುವವರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಪೊಲೀಸ್ ಬಾತ್ಮಿದಾರರಿಂದ ನನಗೆ ಗೊತ್ತಾಗಿದೆ. ಈ ವಿಷಯನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ’ ಎಂದು ಹೇಳಿದರು. ‘ಜನತೆ ವದಂತಿಗಳಿಗೆ ಕಿವಿಗೊಡಬಾರದು. ಪ್ರಚೋದನೆಗೆ ಒಳಗಾಗಬಾರದು. ಶಾಂತಿಸುವ್ಯವಸ್ಥೆ ಕಾಪಾಡಲು ಜನರು ನೆರವಾಗಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>