<p><strong>ರಾಮನಗರ: </strong>ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇದೇ ತಿಂಗಳ 15ರಂದು ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<p>ನಗರದ ಅಭಯ ಆಂಜನೇಯ ಪ್ರತಿಮೆಗೆ ಮಂಗಳವಾರ ಪೂಜೆ ಸಲ್ಲಿಸಿದ ಬಳಿಕ ಅವರು ಪತ್ರಕರ್ತರ ಜತೆ ಮಾತನಾಡಿದರು. ಮೊದಲ ಪಟ್ಟಿಗೆ ತಯಾರಿ ನಡೆಸಿದ್ದು, ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇರುವ ಕಡೆ ಒಮ್ಮತದ ಅಭ್ಯರ್ಥಿ ಆಯ್ಕೆಗಾಗಿ ಸಭೆಗಳನ್ನು ನಡೆಸುತ್ತಿದ್ದೇನೆ ಎಂದರು.</p>.<p>ಚನ್ನಪಟ್ಟಣದಲ್ಲಿ ಸ್ಥಳೀಯರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಕೊಳ್ಳುವಂತೆ ಸೂಚಿಸಿದ್ದೇನೆ. ಅನಿತಾ ಸ್ಪರ್ಧೆ ಬಗ್ಗೆ ನಿರ್ಧರಿಸಿಲ್ಲ ಎಂದು ಹೇಳಿದರು.</p>.<p><strong>ಅಶಾಂತಿಗೆ ಯತ್ನ:</strong> ಹನುಮ ಜಯಂತಿ ನೆಪದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾಜವನ್ನು ಒಡೆಯುತ್ತಿದ್ದು, ಕೋಮುವಾದವನ್ನು ಪ್ರಚೋದಿಸುತ್ತಿವೆ ಎಂದು ಅವರು ಆರೋಪಿಸಿದರು.</p>.<p><strong>ಅಧಿಕಾರಿಗಳಿಗೆ ಎಚ್ಚರಿಕೆ: </strong>ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ನಿವೇಶನಗಳನ್ನು ಹಂಚುವ ನೆಪದಲ್ಲಿ ಕೆಲವರು ಸರ್ಕಾರದ ಹಣ ದೋಚುವ ಯತ್ನ ನಡೆಸಿದ್ದಾರೆ. ಅಧಿಕಾರಿಗಳು ಅವರ ಜತೆ ಕೈ ಜೋಡಿಸಿದಲ್ಲಿ ಜೈಲು ಪಾಲಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.</p>.<p>ನಾಲ್ಕೈದು ಜನ ಸೇರಿಕೊಂಡು ರೈತರಿಂದ ಅಲ್ಪ ಹಣಕ್ಕೆ ಸುಮಾರು 67 ಎಕರೆ ಜಮೀನು ಖರೀದಿಸಿ ಸರ್ಕಾರಕ್ಕೆ ಎಕರೆಗೆ ಕೋಟಿ ರೂಪಾಯಿಗೆ ಮಾರಲು ಹುನ್ನಾರ ನಡೆಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇದೇ ತಿಂಗಳ 15ರಂದು ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<p>ನಗರದ ಅಭಯ ಆಂಜನೇಯ ಪ್ರತಿಮೆಗೆ ಮಂಗಳವಾರ ಪೂಜೆ ಸಲ್ಲಿಸಿದ ಬಳಿಕ ಅವರು ಪತ್ರಕರ್ತರ ಜತೆ ಮಾತನಾಡಿದರು. ಮೊದಲ ಪಟ್ಟಿಗೆ ತಯಾರಿ ನಡೆಸಿದ್ದು, ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳು ಇರುವ ಕಡೆ ಒಮ್ಮತದ ಅಭ್ಯರ್ಥಿ ಆಯ್ಕೆಗಾಗಿ ಸಭೆಗಳನ್ನು ನಡೆಸುತ್ತಿದ್ದೇನೆ ಎಂದರು.</p>.<p>ಚನ್ನಪಟ್ಟಣದಲ್ಲಿ ಸ್ಥಳೀಯರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಕೊಳ್ಳುವಂತೆ ಸೂಚಿಸಿದ್ದೇನೆ. ಅನಿತಾ ಸ್ಪರ್ಧೆ ಬಗ್ಗೆ ನಿರ್ಧರಿಸಿಲ್ಲ ಎಂದು ಹೇಳಿದರು.</p>.<p><strong>ಅಶಾಂತಿಗೆ ಯತ್ನ:</strong> ಹನುಮ ಜಯಂತಿ ನೆಪದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾಜವನ್ನು ಒಡೆಯುತ್ತಿದ್ದು, ಕೋಮುವಾದವನ್ನು ಪ್ರಚೋದಿಸುತ್ತಿವೆ ಎಂದು ಅವರು ಆರೋಪಿಸಿದರು.</p>.<p><strong>ಅಧಿಕಾರಿಗಳಿಗೆ ಎಚ್ಚರಿಕೆ: </strong>ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ಬಡವರಿಗೆ ನಿವೇಶನಗಳನ್ನು ಹಂಚುವ ನೆಪದಲ್ಲಿ ಕೆಲವರು ಸರ್ಕಾರದ ಹಣ ದೋಚುವ ಯತ್ನ ನಡೆಸಿದ್ದಾರೆ. ಅಧಿಕಾರಿಗಳು ಅವರ ಜತೆ ಕೈ ಜೋಡಿಸಿದಲ್ಲಿ ಜೈಲು ಪಾಲಾಗಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.</p>.<p>ನಾಲ್ಕೈದು ಜನ ಸೇರಿಕೊಂಡು ರೈತರಿಂದ ಅಲ್ಪ ಹಣಕ್ಕೆ ಸುಮಾರು 67 ಎಕರೆ ಜಮೀನು ಖರೀದಿಸಿ ಸರ್ಕಾರಕ್ಕೆ ಎಕರೆಗೆ ಕೋಟಿ ರೂಪಾಯಿಗೆ ಮಾರಲು ಹುನ್ನಾರ ನಡೆಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಂಬಂಧಿಸಿದ ಆಯ್ಕೆ ಸಮಿತಿ ಸಭೆಯನ್ನು ಮುಂದೂಡುವಂತೆ ಸೂಚಿಸಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>