<p>ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ‘ರಾಮನು ಕಾಡಿಗೆ ಹೋದನು’ ಚಿತ್ರ ವಿಭಿನ್ನ ಶೀರ್ಷಿಕೆ ಮತ್ತು ಫಸ್ಟ್ ಲುಕ್ನಿಂದಲೇ ಗಮನ ಸೆಳೆದಿತ್ತು. ಈ ಸಿನಿಮಾ ನಿಂತುಹೋಗಿದೆ ಎಂಬ ಸುದ್ದಿ ಇತ್ತೀಚೆಗೆ ಗಾಂಧಿನಗರದ ಗಲ್ಲಿಗಳಲ್ಲಿ ಹೊಗೆಯಾಡುತ್ತಿತ್ತು. ಆದರೆ ಇದೀಗ ಸತೀಶ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.</p>.<p>‘ಸ್ವಲ್ಪ ವಿಳಂಬವಾಗಬಹುದು, ಆದರೆ ರಾಮ ಕಾಡಿಗೆ ಹೋಗುವುದು ಮಾತ್ರ ಖಾತ್ರಿ’ ಎಂಬುದು ಅವರ ಸ್ಪಷ್ಟನೆ.</p>.<p>ಈ ರಾಮ ಕಾಡಿಗೆ ಹೋಗುವ ಕಾರ್ಯಕ್ರಮವನ್ನು ಆರು ತಿಂಗಳ ಮುಂದೂಡಲಾಗಿದೆಯಂತೆ. ಇದಕ್ಕೆ ಕಾರಣವನ್ನು ಕೇಳಿದರೆ ಹುಲುಸಾಗಿ ಬೆಳೆದ ಗಡ್ಡವನ್ನು ನೀವಿಕೊಂಡು ನಗುತ್ತಾರೆ ಸತೀಶ್. ಹೌದು, ರಾಮನ ಚಿತ್ರ ತಡವಾಗುವುದಕ್ಕೆ ಸತೀಶ್ ಗಡ್ಡವೇ ಕಾರಣ!</p>.<p>‘ಸದ್ಯಕ್ಕೆ ನಾನು ‘ಗೋದ್ರಾ’, ‘ಅಯೋಗ್ಯ’ ಮತ್ತು ಒಂದು ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಆ ಮೂರು ಚಿತ್ರಗಳ ಪಾತ್ರಗಳಿಗೂ ಗಡ್ಡ ಬೇಕು. ಆದರೆ ‘ರಾಮನು ಕಾಡಿಗೆ ಹೋದನು’ ಸಿನಿಮಾದ ನಾಯಕನಿಗೆ ಗಡ್ಡ ಇರುವುದಿಲ್ಲ. ಗಡ್ಡ ತೆಗೆಯದೇ ಚಿತ್ರೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಗಡ್ಡ ತೆಗೆದರೆ ಉಳಿದ ಮೂರು ಚಿತ್ರಗಳಿಗೆ ತೊಂದರೆಯಾಗುತ್ತದೆ. ಅಲ್ಲದೇ ಈ ಚಿತ್ರ ನಮ್ಮದೇ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಉಳಿದ ಮೂರು ಚಿತ್ರಗಳ ಚಿತ್ರೀಕರಣ ಮುಗಿಸಿಕೊಂಡು ಈ ಚಿತ್ರವನ್ನು ಕೈಗೆತ್ತಿಕೊಂಡರಾಯ್ತು ಎಂದುಕೊಂಡಿದ್ದೇವೆ’ ಎಂದು ಸುದೀರ್ಘವಾಗಿಯೇ ವಿವರಿಸುತ್ತಾರೆ ಸತೀಶ್.</p>.<p>ಆ ಮೂರು ಚಿತ್ರಗಳ ಕೆಲಸ ಮುಗಿಯಲು ಇನ್ನು ಆರು ತಿಂಗಳ ಸಮಯ ಬೇಕು. ಆದ್ದರಿಂದ ಆರು ತಿಂಗಳ ನಂತರವೇ ಕಾಡಿಗೆ ಹೋಗಲು ಅವರು ನಿರ್ಧರಿಸಿದ್ದಾರೆ.</p>.<p>ಇದರ ಜತಗೇ ‘ಕೆಲವರು ಈ ಚಿತ್ರ ನಿಂತುಹೋಗಿದೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಬಳಿ ಯಾರೂ ಕೇಳುವುದಿಲ್ಲ. ಅವರಷ್ಟಕ್ಕೆ ಅವರೇ ಕಲ್ಪನೆ ಮಾಡಿಕೊಂಡು ಇಂಥ ಗಾಳಿಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ’ ಎಂದು ಬೇಸರವನ್ನೂ ಅವರು ವ್ಯಕ್ತಪಡಿಸುತ್ತಾರೆ.</p>.<p>ವಿಕಾಸ್ ಪಂಪಾಪತಿ ಹಾಗೂ ವಿನಯ್ ಪಂಪಾಪತಿ ಸಹೋದರರು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಐಶಾನಿ ಶೆಟ್ಟಿ ನಾಯಕಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ‘ರಾಮನು ಕಾಡಿಗೆ ಹೋದನು’ ಚಿತ್ರ ವಿಭಿನ್ನ ಶೀರ್ಷಿಕೆ ಮತ್ತು ಫಸ್ಟ್ ಲುಕ್ನಿಂದಲೇ ಗಮನ ಸೆಳೆದಿತ್ತು. ಈ ಸಿನಿಮಾ ನಿಂತುಹೋಗಿದೆ ಎಂಬ ಸುದ್ದಿ ಇತ್ತೀಚೆಗೆ ಗಾಂಧಿನಗರದ ಗಲ್ಲಿಗಳಲ್ಲಿ ಹೊಗೆಯಾಡುತ್ತಿತ್ತು. ಆದರೆ ಇದೀಗ ಸತೀಶ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.</p>.<p>‘ಸ್ವಲ್ಪ ವಿಳಂಬವಾಗಬಹುದು, ಆದರೆ ರಾಮ ಕಾಡಿಗೆ ಹೋಗುವುದು ಮಾತ್ರ ಖಾತ್ರಿ’ ಎಂಬುದು ಅವರ ಸ್ಪಷ್ಟನೆ.</p>.<p>ಈ ರಾಮ ಕಾಡಿಗೆ ಹೋಗುವ ಕಾರ್ಯಕ್ರಮವನ್ನು ಆರು ತಿಂಗಳ ಮುಂದೂಡಲಾಗಿದೆಯಂತೆ. ಇದಕ್ಕೆ ಕಾರಣವನ್ನು ಕೇಳಿದರೆ ಹುಲುಸಾಗಿ ಬೆಳೆದ ಗಡ್ಡವನ್ನು ನೀವಿಕೊಂಡು ನಗುತ್ತಾರೆ ಸತೀಶ್. ಹೌದು, ರಾಮನ ಚಿತ್ರ ತಡವಾಗುವುದಕ್ಕೆ ಸತೀಶ್ ಗಡ್ಡವೇ ಕಾರಣ!</p>.<p>‘ಸದ್ಯಕ್ಕೆ ನಾನು ‘ಗೋದ್ರಾ’, ‘ಅಯೋಗ್ಯ’ ಮತ್ತು ಒಂದು ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಆ ಮೂರು ಚಿತ್ರಗಳ ಪಾತ್ರಗಳಿಗೂ ಗಡ್ಡ ಬೇಕು. ಆದರೆ ‘ರಾಮನು ಕಾಡಿಗೆ ಹೋದನು’ ಸಿನಿಮಾದ ನಾಯಕನಿಗೆ ಗಡ್ಡ ಇರುವುದಿಲ್ಲ. ಗಡ್ಡ ತೆಗೆಯದೇ ಚಿತ್ರೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಗಡ್ಡ ತೆಗೆದರೆ ಉಳಿದ ಮೂರು ಚಿತ್ರಗಳಿಗೆ ತೊಂದರೆಯಾಗುತ್ತದೆ. ಅಲ್ಲದೇ ಈ ಚಿತ್ರ ನಮ್ಮದೇ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಉಳಿದ ಮೂರು ಚಿತ್ರಗಳ ಚಿತ್ರೀಕರಣ ಮುಗಿಸಿಕೊಂಡು ಈ ಚಿತ್ರವನ್ನು ಕೈಗೆತ್ತಿಕೊಂಡರಾಯ್ತು ಎಂದುಕೊಂಡಿದ್ದೇವೆ’ ಎಂದು ಸುದೀರ್ಘವಾಗಿಯೇ ವಿವರಿಸುತ್ತಾರೆ ಸತೀಶ್.</p>.<p>ಆ ಮೂರು ಚಿತ್ರಗಳ ಕೆಲಸ ಮುಗಿಯಲು ಇನ್ನು ಆರು ತಿಂಗಳ ಸಮಯ ಬೇಕು. ಆದ್ದರಿಂದ ಆರು ತಿಂಗಳ ನಂತರವೇ ಕಾಡಿಗೆ ಹೋಗಲು ಅವರು ನಿರ್ಧರಿಸಿದ್ದಾರೆ.</p>.<p>ಇದರ ಜತಗೇ ‘ಕೆಲವರು ಈ ಚಿತ್ರ ನಿಂತುಹೋಗಿದೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಬಳಿ ಯಾರೂ ಕೇಳುವುದಿಲ್ಲ. ಅವರಷ್ಟಕ್ಕೆ ಅವರೇ ಕಲ್ಪನೆ ಮಾಡಿಕೊಂಡು ಇಂಥ ಗಾಳಿಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ’ ಎಂದು ಬೇಸರವನ್ನೂ ಅವರು ವ್ಯಕ್ತಪಡಿಸುತ್ತಾರೆ.</p>.<p>ವಿಕಾಸ್ ಪಂಪಾಪತಿ ಹಾಗೂ ವಿನಯ್ ಪಂಪಾಪತಿ ಸಹೋದರರು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಐಶಾನಿ ಶೆಟ್ಟಿ ನಾಯಕಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>