<p><strong>ಇಸ್ಲಾಮಾಬಾದ್</strong>: ಭಯೋತ್ಪಾದನೆ ಚಟುವಟಿಕೆಗಳನ್ನು ದಮನ ಮಾಡಲು ಪಾಕಿಸ್ತಾನ ಕೈಗೊಂಡಿರುವ ಕ್ರಮಗಳು ಸಾಲದು ಎಂದು ಅಮೆರಿಕ ಹೇಳಿದೆ.</p>.<p>ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಬೇಕು. ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಂಡು ಭಯೋತ್ಪಾದನೆ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ.</p>.<p>ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಅವರು ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿ ಹಾಗೂ ಸೇನಾ ಮುಖ್ಯಸ್ಥ ಜನರಲ್ ಒಮರ್ ಜಾವೇದ್ ಬಾಜ್ವಾ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ನಂತರ ಅವರು ಈ ಸೂಚನೆ ನೀಡಿದ್ದಾರೆ.</p>.<p>ಉಗ್ರರ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಮ್ಯಾಟಿಸ್ ಅವರು ಹೇಳಿದ್ದಾರೆ.</p>.<p>ತಮ್ಮ ಪ್ರವಾಸದ ಅಂತಿಮ ದಿನ ಮಾತನಾಡಿದ ಮ್ಯಾಟಿಸ್, ’ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನವು ತನ್ನ ನಿರ್ಧಾರಗಳನ್ನು ಮರುಪರಿಶೀಲನೆ ನಡೆಸಲೇಬೇಕು ಹಾಗೂ ಕಾರ್ಯಾಚರಣೆಯ ಶೈಲಿಯೂ ಬದಲಾಗಬೇಕಾಗಿದೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಯೋತ್ಪಾದನೆ ಚಟುವಟಿಕೆಗಳನ್ನು ದಮನ ಮಾಡಲು ಪಾಕಿಸ್ತಾನ ಕೈಗೊಂಡಿರುವ ಕ್ರಮಗಳು ಸಾಲದು ಎಂದು ಅಮೆರಿಕ ಹೇಳಿದೆ.</p>.<p>ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಬೇಕು. ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಂಡು ಭಯೋತ್ಪಾದನೆ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ.</p>.<p>ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಅವರು ಪ್ರಧಾನಿ ಶಾಹಿದ್ ಖಕಾನ್ ಅಬ್ಬಾಸಿ ಹಾಗೂ ಸೇನಾ ಮುಖ್ಯಸ್ಥ ಜನರಲ್ ಒಮರ್ ಜಾವೇದ್ ಬಾಜ್ವಾ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ನಂತರ ಅವರು ಈ ಸೂಚನೆ ನೀಡಿದ್ದಾರೆ.</p>.<p>ಉಗ್ರರ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಮ್ಯಾಟಿಸ್ ಅವರು ಹೇಳಿದ್ದಾರೆ.</p>.<p>ತಮ್ಮ ಪ್ರವಾಸದ ಅಂತಿಮ ದಿನ ಮಾತನಾಡಿದ ಮ್ಯಾಟಿಸ್, ’ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನವು ತನ್ನ ನಿರ್ಧಾರಗಳನ್ನು ಮರುಪರಿಶೀಲನೆ ನಡೆಸಲೇಬೇಕು ಹಾಗೂ ಕಾರ್ಯಾಚರಣೆಯ ಶೈಲಿಯೂ ಬದಲಾಗಬೇಕಾಗಿದೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>