<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದ ಕಾಮಗಾರಿಗೆ ಬಲಿಯಾಗಬೇಕಿದ್ದ 115ಕ್ಕೂ ಹೆಚ್ಚು ಮರಗಳನ್ನು ವೈಟ್ಫೀಲ್ಡ್ನ ಸತ್ಯಸಾಯಿ ಆಸ್ಪತ್ರೆಯ ಆವರಣಕ್ಕೆ ಸ್ಥಳಾಂತರಿಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಬೈಯಪ್ಪನಹಳ್ಳಿಯ ಕಡೆಯಿಂದ ವೈಟ್ಫೀಲ್ಡ್ಗೆ ಹೂಡಿ ಹಾಗೂ ಐಟಿಪಿಎಲ್ ಮಾರ್ಗವಾಗಿ ಸಾಗುತ್ತಿರುವ ಕಾಮಗಾರಿಗಾಗಿ 225 ಮರಗಳನ್ನು ಕಡಿಯಲು ಮೆಟ್ರೊ ನಿಗಮ ಉದ್ದೇಶಿಸಿತ್ತು. ಈ ಪೈಕಿ 60 ಮರಗಳನ್ನು ಈಗಾಗಲೇ ಕಡಿಯಲಾಗಿದೆ. 115 ಮರಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ವೃಕ್ಷ ವೈದ್ಯ ವಿಜಯ್ ನಿಶಾಂತ್ ಹಾಗೂ ಸ್ಥಳಿಯ ಟೆಕಿಗಳು ಮುಂದಾಗಿದ್ದಾರೆ. ನಾಲ್ಕೈದು ವರ್ಷ ಪ್ರಾಯದ ಮೂರು ಸಣ್ಣ ಮರಗಳನ್ನು ಮಂಗಳವಾರ ಸ್ಥಳಾಂತರಿಸಲಾಯಿತು.</p>.<p>ಈ ಮರಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ವಿಜಯ್ ನಿಶಾಂತ್ ಹಾಗೂ ಸ್ಥಳೀಯರು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಬಿಬಿಎಂಪಿ, ಬಿಎಂಆರ್ಸಿಎಲ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ಬಂದಿರಲಿಲ್ಲ. ಹೀಗಾಗಿ ನಾಗರಿಕರೇ ಒಗ್ಗೂಡಿ ದೇಣಿಗೆ ಸಂಗ್ರಹಿಸಿ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಸಲು ಸಂಕಲ್ಪ ಮಾಡಿದ್ದಾರೆ.</p>.<p>‘ತರಬೇತಿ ಪಡೆದ ಸಿಬ್ಬಂದಿ ಇಲ್ಲದ ಕಾರಣಕ್ಕೆ ಈ ಕಾರ್ಯ ಕೊಂಚ ನಿಧಾನಗತಿಯಲ್ಲಿ ಸಾಗುತ್ತಿದೆ. ಮರವೊಂದಕ್ಕೆ ಔಷಧಿಗೆ ₹1,000 ವೆಚ್ಚ ಆಗಲಿದೆ. ರಾಜ್ಯ ಸರ್ಕಾರವು ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯ ತಂಡ ರಚಿಸಿ ನೆರವು ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಸತ್ಯಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಮೆಡಿಕಲ್ ಸೈನ್ಸ್ ಸಂಸ್ಥೆಯು ಸ್ಥಳಾಂತರಗೊಂಡ ಮರಗಳ ನಿರ್ವಹಣೆ ಕಾರ್ಯ ಮಾಡಲಿದ್ದು ಎರಡು ತಿಂಗಳ ಬಳಿಕ ಚಿಗುರು ಮೂಡಿ ಸೊಂಪಾಗಿ ಬೆಳೆಯಲಿದೆ’ ಎಂದು ತಿಳಿಸಿದರು.</p>.<p>ಮರಗಳ ಸ್ಥಳಾಂತರ ಕಾಮಗಾರಿಗೆ ಮೆಟ್ರೊ ನಿಗಮ ಸಹಕಾರ ನೀಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಎರಡನೇ ಹಂತದ ಕಾಮಗಾರಿಗೆ ಬಲಿಯಾಗಬೇಕಿದ್ದ 115ಕ್ಕೂ ಹೆಚ್ಚು ಮರಗಳನ್ನು ವೈಟ್ಫೀಲ್ಡ್ನ ಸತ್ಯಸಾಯಿ ಆಸ್ಪತ್ರೆಯ ಆವರಣಕ್ಕೆ ಸ್ಥಳಾಂತರಿಸುವ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.</p>.<p>ಬೈಯಪ್ಪನಹಳ್ಳಿಯ ಕಡೆಯಿಂದ ವೈಟ್ಫೀಲ್ಡ್ಗೆ ಹೂಡಿ ಹಾಗೂ ಐಟಿಪಿಎಲ್ ಮಾರ್ಗವಾಗಿ ಸಾಗುತ್ತಿರುವ ಕಾಮಗಾರಿಗಾಗಿ 225 ಮರಗಳನ್ನು ಕಡಿಯಲು ಮೆಟ್ರೊ ನಿಗಮ ಉದ್ದೇಶಿಸಿತ್ತು. ಈ ಪೈಕಿ 60 ಮರಗಳನ್ನು ಈಗಾಗಲೇ ಕಡಿಯಲಾಗಿದೆ. 115 ಮರಗಳನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ವೃಕ್ಷ ವೈದ್ಯ ವಿಜಯ್ ನಿಶಾಂತ್ ಹಾಗೂ ಸ್ಥಳಿಯ ಟೆಕಿಗಳು ಮುಂದಾಗಿದ್ದಾರೆ. ನಾಲ್ಕೈದು ವರ್ಷ ಪ್ರಾಯದ ಮೂರು ಸಣ್ಣ ಮರಗಳನ್ನು ಮಂಗಳವಾರ ಸ್ಥಳಾಂತರಿಸಲಾಯಿತು.</p>.<p>ಈ ಮರಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ವಿಜಯ್ ನಿಶಾಂತ್ ಹಾಗೂ ಸ್ಥಳೀಯರು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಬಿಬಿಎಂಪಿ, ಬಿಎಂಆರ್ಸಿಎಲ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ಬಂದಿರಲಿಲ್ಲ. ಹೀಗಾಗಿ ನಾಗರಿಕರೇ ಒಗ್ಗೂಡಿ ದೇಣಿಗೆ ಸಂಗ್ರಹಿಸಿ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಸಲು ಸಂಕಲ್ಪ ಮಾಡಿದ್ದಾರೆ.</p>.<p>‘ತರಬೇತಿ ಪಡೆದ ಸಿಬ್ಬಂದಿ ಇಲ್ಲದ ಕಾರಣಕ್ಕೆ ಈ ಕಾರ್ಯ ಕೊಂಚ ನಿಧಾನಗತಿಯಲ್ಲಿ ಸಾಗುತ್ತಿದೆ. ಮರವೊಂದಕ್ಕೆ ಔಷಧಿಗೆ ₹1,000 ವೆಚ್ಚ ಆಗಲಿದೆ. ರಾಜ್ಯ ಸರ್ಕಾರವು ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯ ತಂಡ ರಚಿಸಿ ನೆರವು ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಸತ್ಯಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಮೆಡಿಕಲ್ ಸೈನ್ಸ್ ಸಂಸ್ಥೆಯು ಸ್ಥಳಾಂತರಗೊಂಡ ಮರಗಳ ನಿರ್ವಹಣೆ ಕಾರ್ಯ ಮಾಡಲಿದ್ದು ಎರಡು ತಿಂಗಳ ಬಳಿಕ ಚಿಗುರು ಮೂಡಿ ಸೊಂಪಾಗಿ ಬೆಳೆಯಲಿದೆ’ ಎಂದು ತಿಳಿಸಿದರು.</p>.<p>ಮರಗಳ ಸ್ಥಳಾಂತರ ಕಾಮಗಾರಿಗೆ ಮೆಟ್ರೊ ನಿಗಮ ಸಹಕಾರ ನೀಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>