ಈ ಮರಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ವಿಜಯ್ ನಿಶಾಂತ್ ಹಾಗೂ ಸ್ಥಳೀಯರು ಕೆಲವು ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಬಿಬಿಎಂಪಿ, ಬಿಎಂಆರ್ಸಿಎಲ್ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ಬಂದಿರಲಿಲ್ಲ. ಹೀಗಾಗಿ ನಾಗರಿಕರೇ ಒಗ್ಗೂಡಿ ದೇಣಿಗೆ ಸಂಗ್ರಹಿಸಿ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಸಲು ಸಂಕಲ್ಪ ಮಾಡಿದ್ದಾರೆ.