<p><strong>ಎಚ್.ಡಿ.ಕೋಟೆ:</strong> ನಿಯಮ ಉಲ್ಲಂಘಿಸಿ ಸಾರಿಗೆ ನಿಗಮದ ಬಸ್ಸುಗಳಲ್ಲಿ ‘ಕರ್ನಾಟಕ ದರ್ಶನ’ ಪ್ರವಾಸಕ್ಕೆ ತೆರಳುತ್ತಿದ್ದ ಮಕ್ಕಳ ಊಟ ಮತ್ತು ತಿಂಡಿ ತಯಾರಿಕೆಗಾಗಿ 6 ಸಿಲಿಂಡರ್ ತೆಗೆದುಕೊಂಡು ಹೋಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಮಾಹಿತಿ ತಿಳಿದ ಪೋಷಕರು ಹಾಗೂ ಕೆಲವು ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಿಲಿಂಡರ್ ಕೆಳಗಿಳಿಸಿ ಪ್ರವಾಸಕ್ಕೆ ತೆರಳಿದರು.</p>.<p>‘ಈ ಎಲ್ಲವೂ ಬಿಸಿಯೂಟ ತಯಾರಿಕೆಗಾಗಿ ಶಾಲೆಗಳಿಗೆ ವಿತರಣೆ ಯಾಗಿದ್ದ ಸಿಲಿಂಡರ್ಗಳಾಗಿವೆ. ಮಕ್ಕಳ ಊಟಕ್ಕಾಗಿಯೇ ಸರ್ಕಾರ ಹಣ ನೀಡುತ್ತದೆ. ಆದರೆ, ಇಲ್ಲಿ ಬಿಸಿಯೂಟದ ಸಿಲಿಂಡರ್ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಲಾಗಿದೆ’ ಎಂದು ಪೋಷಕರು ಆರೋಪಿಸಿದರು.</p>.<p>ತಾಲ್ಲೂಕಿನ ವಿವಿಧ ಶಾಲೆಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 176 ವಿದ್ಯಾರ್ಥಿಗಳು ಕರ್ನಾಟಕ ದರ್ಶನಕ್ಕೆ ಪ್ರವಾಸ ತೆರಳಿದರು. ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಯ ವೆಚ್ಚವಾಗಿ ₹ 3,200 ನೀಡುತ್ತದೆ. ಅದರಂತೆ ತಾಲ್ಲೂಕಿಗೆ ಈ ಬಾರಿ ₹ 7.65 ಲಕ್ಷ ಬಿಡುಗಡೆಯಾಗಿದೆ. ನಿಯಮದ ಪ್ರಕಾರ ಮಕ್ಕಳಿಗೆ ಪ್ರವಾಸಿ ಸ್ಥಳಗಳಲ್ಲಿ ಸಿಗುವ ಉತ್ತಮ ಊಟ– ತಿಂಡಿ ಕಲ್ಪಿಸಬೇಕು. ಆದರೆ, ಈ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.</p>.<p>ಮಕ್ಕಳ ಶೈಕ್ಷಣಿಕ ಸಾಧನೆ ಮತ್ತು ಇತರೆ ಚಟುವಟಿಕೆ ಆಧರಿಸಿ ಪ್ರತಿ ಶಾಲೆಯಿಂದ 5ರಂತೆ 176 ಮಕ್ಕಳು ಆಯ್ಕೆಯಾಗಿದ್ದಾರೆ. ಪ್ರವಾಸ ಹೋಗಲು ದೂರದ ಊರುಗಳಿಂದ ತಾಲ್ಲೂಕು ಕೇಂದ್ರಕ್ಕೆ ರಾತ್ರಿಯೇ ಬರುವ ಮಕ್ಕಳಿಗೆ ಇಲಾಖೆಯಿಂದಲೇ ಊಟ ಮತ್ತು ವಸತಿ ಒದಗಿಸಬೇಕು.</p>.<p>ಆದರೆ, ಇಲ್ಲಿ ಕ್ಷೇತ್ರ ಸಂಪನ್ಮೂಲ ಕಚೇರಿ ಪಕ್ಕದ ಕಸ್ತೂರಬಾ ವಸತಿ ನಿಲಯದಲ್ಲಿ ಊಟ ಹಾಕಿಸಿ ಅಲ್ಲಿಯೇ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೋಷಕರು ಆರೋಪಿಸಿದರು.</p>.<p>ಬಿಸಿಯೂಟಕ್ಕೆ ಬಳಸುವ ಎಣ್ಣೆ, ತೊಗರಿ ಬೇಳೆ ಕೂಡ ತೆಗೆದುಕೊಂಡಿ ದ್ದಾರೆ. ಈ ಬಗ್ಗೆ ಇಲಾಖೆಯ ಉನ್ನತಾಧಿಕಾರಿಗಳು ತನಿಖೆ ಮಾಡಿದರೆ ಯೋಜನೆಗೆ ಸಾರ್ಥಕತೆ ಸಿಗುತ್ತದೆ ಎಂಬುದು ಪೋಷಕರು ಆಗ್ರಹಿಸಿದರು.</p>.<p>‘ಈ ಬಾರಿ ಶಿಕ್ಷಕರು ಮಕ್ಕಳ ಜತೆ ಪ್ರವಾಸಕ್ಕೆ ತೆರಳಿಲ್ಲ. ಬದಲಾಗಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯ ಆದೇಶದ ಅನುಸಾರ ಸಿ.ಆರ್.ಪಿ, ಬಿ.ಆರ್.ಪಿಗಳು ಮತ್ತು ಅವರಿಗೆ ಬೇಕಾದ ಕೆಲವೇ ಕೆಲವು ಶಿಕ್ಷಕರು ಹೋಗಿದ್ದಾರೆ’ ಎಂದು ಇತರೆ ಶಿಕ್ಷಕರು ಆರೋಪಿಸಿದರು.</p>.<p>ತಾಲ್ಲೂಕಿನ ಹಂಪಾಪುರ ಗ್ರಾಮ ಪಂಚಾಯಿತಿ ಉಪಚುನಾವಣೆ ನಿಗದಿ ಯಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶಶಿಧರ್ ಪ್ರವಾಸಕ್ಕೆ ತೆರಳಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯಿಮಾ ಸುಲ್ತಾನ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ:</strong> ನಿಯಮ ಉಲ್ಲಂಘಿಸಿ ಸಾರಿಗೆ ನಿಗಮದ ಬಸ್ಸುಗಳಲ್ಲಿ ‘ಕರ್ನಾಟಕ ದರ್ಶನ’ ಪ್ರವಾಸಕ್ಕೆ ತೆರಳುತ್ತಿದ್ದ ಮಕ್ಕಳ ಊಟ ಮತ್ತು ತಿಂಡಿ ತಯಾರಿಕೆಗಾಗಿ 6 ಸಿಲಿಂಡರ್ ತೆಗೆದುಕೊಂಡು ಹೋಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಮಾಹಿತಿ ತಿಳಿದ ಪೋಷಕರು ಹಾಗೂ ಕೆಲವು ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಿಲಿಂಡರ್ ಕೆಳಗಿಳಿಸಿ ಪ್ರವಾಸಕ್ಕೆ ತೆರಳಿದರು.</p>.<p>‘ಈ ಎಲ್ಲವೂ ಬಿಸಿಯೂಟ ತಯಾರಿಕೆಗಾಗಿ ಶಾಲೆಗಳಿಗೆ ವಿತರಣೆ ಯಾಗಿದ್ದ ಸಿಲಿಂಡರ್ಗಳಾಗಿವೆ. ಮಕ್ಕಳ ಊಟಕ್ಕಾಗಿಯೇ ಸರ್ಕಾರ ಹಣ ನೀಡುತ್ತದೆ. ಆದರೆ, ಇಲ್ಲಿ ಬಿಸಿಯೂಟದ ಸಿಲಿಂಡರ್ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಲಾಗಿದೆ’ ಎಂದು ಪೋಷಕರು ಆರೋಪಿಸಿದರು.</p>.<p>ತಾಲ್ಲೂಕಿನ ವಿವಿಧ ಶಾಲೆಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 176 ವಿದ್ಯಾರ್ಥಿಗಳು ಕರ್ನಾಟಕ ದರ್ಶನಕ್ಕೆ ಪ್ರವಾಸ ತೆರಳಿದರು. ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಯ ವೆಚ್ಚವಾಗಿ ₹ 3,200 ನೀಡುತ್ತದೆ. ಅದರಂತೆ ತಾಲ್ಲೂಕಿಗೆ ಈ ಬಾರಿ ₹ 7.65 ಲಕ್ಷ ಬಿಡುಗಡೆಯಾಗಿದೆ. ನಿಯಮದ ಪ್ರಕಾರ ಮಕ್ಕಳಿಗೆ ಪ್ರವಾಸಿ ಸ್ಥಳಗಳಲ್ಲಿ ಸಿಗುವ ಉತ್ತಮ ಊಟ– ತಿಂಡಿ ಕಲ್ಪಿಸಬೇಕು. ಆದರೆ, ಈ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.</p>.<p>ಮಕ್ಕಳ ಶೈಕ್ಷಣಿಕ ಸಾಧನೆ ಮತ್ತು ಇತರೆ ಚಟುವಟಿಕೆ ಆಧರಿಸಿ ಪ್ರತಿ ಶಾಲೆಯಿಂದ 5ರಂತೆ 176 ಮಕ್ಕಳು ಆಯ್ಕೆಯಾಗಿದ್ದಾರೆ. ಪ್ರವಾಸ ಹೋಗಲು ದೂರದ ಊರುಗಳಿಂದ ತಾಲ್ಲೂಕು ಕೇಂದ್ರಕ್ಕೆ ರಾತ್ರಿಯೇ ಬರುವ ಮಕ್ಕಳಿಗೆ ಇಲಾಖೆಯಿಂದಲೇ ಊಟ ಮತ್ತು ವಸತಿ ಒದಗಿಸಬೇಕು.</p>.<p>ಆದರೆ, ಇಲ್ಲಿ ಕ್ಷೇತ್ರ ಸಂಪನ್ಮೂಲ ಕಚೇರಿ ಪಕ್ಕದ ಕಸ್ತೂರಬಾ ವಸತಿ ನಿಲಯದಲ್ಲಿ ಊಟ ಹಾಕಿಸಿ ಅಲ್ಲಿಯೇ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೋಷಕರು ಆರೋಪಿಸಿದರು.</p>.<p>ಬಿಸಿಯೂಟಕ್ಕೆ ಬಳಸುವ ಎಣ್ಣೆ, ತೊಗರಿ ಬೇಳೆ ಕೂಡ ತೆಗೆದುಕೊಂಡಿ ದ್ದಾರೆ. ಈ ಬಗ್ಗೆ ಇಲಾಖೆಯ ಉನ್ನತಾಧಿಕಾರಿಗಳು ತನಿಖೆ ಮಾಡಿದರೆ ಯೋಜನೆಗೆ ಸಾರ್ಥಕತೆ ಸಿಗುತ್ತದೆ ಎಂಬುದು ಪೋಷಕರು ಆಗ್ರಹಿಸಿದರು.</p>.<p>‘ಈ ಬಾರಿ ಶಿಕ್ಷಕರು ಮಕ್ಕಳ ಜತೆ ಪ್ರವಾಸಕ್ಕೆ ತೆರಳಿಲ್ಲ. ಬದಲಾಗಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯ ಆದೇಶದ ಅನುಸಾರ ಸಿ.ಆರ್.ಪಿ, ಬಿ.ಆರ್.ಪಿಗಳು ಮತ್ತು ಅವರಿಗೆ ಬೇಕಾದ ಕೆಲವೇ ಕೆಲವು ಶಿಕ್ಷಕರು ಹೋಗಿದ್ದಾರೆ’ ಎಂದು ಇತರೆ ಶಿಕ್ಷಕರು ಆರೋಪಿಸಿದರು.</p>.<p>ತಾಲ್ಲೂಕಿನ ಹಂಪಾಪುರ ಗ್ರಾಮ ಪಂಚಾಯಿತಿ ಉಪಚುನಾವಣೆ ನಿಗದಿ ಯಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶಶಿಧರ್ ಪ್ರವಾಸಕ್ಕೆ ತೆರಳಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯಿಮಾ ಸುಲ್ತಾನ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟಸ್ವಾಮಿ ಹಸಿರು ಬಾವುಟ ತೋರಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>