ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲಿಂಗಾಯತರ ಏಕತೆಯನ್ನು ಒಡೆದಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಲಿಂಗಾಯತ ಸಮುದಾಯದ ಹಲವರು ಮುಖ್ಯಮಂತ್ರಿಗಳಾಗಿದ್ದರು. ಆದರೆ, ಕಾಂಗ್ರೆಸ್ ಪಕ್ಷವು ಆ ಸಮುದಾಯವನ್ನು ಈಗ ನುಚ್ಚು ನೂರಾಗುವಂತೆ ಮಾಡಿದೆ’ ಎಂದರು.