ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯಲ್ಲಿ ಸಮುದ್ರದ ಅಲೆಗಳು ಅಪ್ಪಳಿಸಿ ನಾಗಪ್ಪ ಪಾಂಡು ಮೇಸ್ತ ಎಂಬುವವರ ಮನೆಗೆ ಭಾಗಶಃ ಹಾನಿಯಾಗಿದೆ. ಅಲೆಗಳ ಅಬ್ಬರಕ್ಕೆ ಬೆದರಿ, ಸಮುದ್ರ ತೀರದ ನಾಲ್ಕು ಮನೆಗಳ ಜನರು ಅಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಬೆಳಗಾವಿ ಸೇರಿದಂತೆ ಜಿಲ್ಲೆಯ ಖಾನಾಪೂರ, ಕಿತ್ತೂರ, ಹಿರೇಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಬೈಲಹೊಂಗಲ, ಹುಕ್ಕೇರಿಯಲ್ಲಿ ತುಂತುರು ಮಳೆಯಾಗಿದೆ.