<p><strong>ನವದೆಹಲಿ: </strong>‘ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ನಾನು ಒಬ್ಬ ಮನುಷ್ಯ. ಮನುಷ್ಯರಿಂದ ತಪ್ಪುಗಳಾಗುವುದು ಸಹಜ. ಇಂಥ ತಪ್ಪುಗಳಿದ್ದಾಗಲೇ ಜೀವನ ಆಸಕ್ತಿದಾಯಕವಾಗಿರುತ್ತದೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.</p>.<p>ಅಗತ್ಯ ವಸ್ತುಗಳ ಬೆಲೆ ಏರಿಕೆ ಲೆಕ್ಕಾಚಾರದಲ್ಲಿ ಆದ ತಪ್ಪನ್ನೇ ದೊಡ್ಡ ಪ್ರಮಾದ ಎಂಬಂತೆ ಲೇವಡಿ ಮಾಡುತ್ತಿರುವ ಬಿಜೆಪಿ ಬೆಂಬಲಿಗರನ್ನು ಅವರು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಮೋದಿ ಅವರನ್ನೂ ಲೇವಡಿ ಮಾಡಿದ್ದಾರೆ.</p>.<p>‘ಬಿಜೆಪಿಯ ಮಿತ್ರರೇ, ನಾನೇನೂ ನರೇಂದ್ರ ಭಾಯ್ ಅಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ. ಮನುಷ್ಯರಿಂದಲ್ಲದೆ ಮತ್ತೆ ಇನ್ನಾರಿಂದ ತಪ್ಪಾಗಲು ಸಾಧ್ಯ’ ಎಂದು ಪ್ರಶ್ನಿಸಿರುವ ರಾಹುಲ್ ಗಾಂಧಿ, ಯಾವುದೇ ಹಿಂಜರಿಕೆ ಇಲ್ಲದೆ ತಮ್ಮಿಂದ ಆದ ತಪ್ಪನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ.</p>.<p>‘ನನ್ನಿಂದ ಆದ ತಪ್ಪನ್ನು ಎತ್ತಿ ತೋರಿಸಿದಕ್ಕೆ ನಿಮಗೆ ಧನ್ಯವಾದ. ನನ್ನಿಂದಾಗುವ ತಪ್ಪುಗಳನ್ನು ತೋರಿಸುತ್ತಿದ್ದರೆ ತಿದ್ದಿಕೊಳ್ಳಲು ನಿಜಕ್ಕೂ ಸಹಾಯವಾಗುತ್ತದೆ. ನಿಮ್ಮೆಲ್ಲರ ಪ್ರೀತಿಗೆ ಋಣಿ’ ಎಂದು ರಾಹುಲ್ ಬುಧವಾರ ಟ್ವೀಟ್ ಮಾಡಿದ್ದಾರೆ.</p>.<p>‘ಭಾರತದಲ್ಲಿ ಪ್ರಾಮಾಣಿಕ ರಾಜಕಾರಣಿಯಾಗಿರುವುದು ಅತ್ಯಂತ ಕಷ್ಟದ ಕೆಲಸ. ಆತ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅದನ್ನು ನಾನು ಅನುಭವಿಸಿದ್ದೇನೆ’ ಎಂದು ರಾಹುಲ್ ಇತ್ತೀಚೆಗೆ ಗುಜರಾತ್ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ನಾನು ಒಬ್ಬ ಮನುಷ್ಯ. ಮನುಷ್ಯರಿಂದ ತಪ್ಪುಗಳಾಗುವುದು ಸಹಜ. ಇಂಥ ತಪ್ಪುಗಳಿದ್ದಾಗಲೇ ಜೀವನ ಆಸಕ್ತಿದಾಯಕವಾಗಿರುತ್ತದೆ’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.</p>.<p>ಅಗತ್ಯ ವಸ್ತುಗಳ ಬೆಲೆ ಏರಿಕೆ ಲೆಕ್ಕಾಚಾರದಲ್ಲಿ ಆದ ತಪ್ಪನ್ನೇ ದೊಡ್ಡ ಪ್ರಮಾದ ಎಂಬಂತೆ ಲೇವಡಿ ಮಾಡುತ್ತಿರುವ ಬಿಜೆಪಿ ಬೆಂಬಲಿಗರನ್ನು ಅವರು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜತೆಗೆ ಮೋದಿ ಅವರನ್ನೂ ಲೇವಡಿ ಮಾಡಿದ್ದಾರೆ.</p>.<p>‘ಬಿಜೆಪಿಯ ಮಿತ್ರರೇ, ನಾನೇನೂ ನರೇಂದ್ರ ಭಾಯ್ ಅಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ. ಮನುಷ್ಯರಿಂದಲ್ಲದೆ ಮತ್ತೆ ಇನ್ನಾರಿಂದ ತಪ್ಪಾಗಲು ಸಾಧ್ಯ’ ಎಂದು ಪ್ರಶ್ನಿಸಿರುವ ರಾಹುಲ್ ಗಾಂಧಿ, ಯಾವುದೇ ಹಿಂಜರಿಕೆ ಇಲ್ಲದೆ ತಮ್ಮಿಂದ ಆದ ತಪ್ಪನ್ನು ನೇರವಾಗಿ ಒಪ್ಪಿಕೊಂಡಿದ್ದಾರೆ.</p>.<p>‘ನನ್ನಿಂದ ಆದ ತಪ್ಪನ್ನು ಎತ್ತಿ ತೋರಿಸಿದಕ್ಕೆ ನಿಮಗೆ ಧನ್ಯವಾದ. ನನ್ನಿಂದಾಗುವ ತಪ್ಪುಗಳನ್ನು ತೋರಿಸುತ್ತಿದ್ದರೆ ತಿದ್ದಿಕೊಳ್ಳಲು ನಿಜಕ್ಕೂ ಸಹಾಯವಾಗುತ್ತದೆ. ನಿಮ್ಮೆಲ್ಲರ ಪ್ರೀತಿಗೆ ಋಣಿ’ ಎಂದು ರಾಹುಲ್ ಬುಧವಾರ ಟ್ವೀಟ್ ಮಾಡಿದ್ದಾರೆ.</p>.<p>‘ಭಾರತದಲ್ಲಿ ಪ್ರಾಮಾಣಿಕ ರಾಜಕಾರಣಿಯಾಗಿರುವುದು ಅತ್ಯಂತ ಕಷ್ಟದ ಕೆಲಸ. ಆತ ಅನೇಕ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅದನ್ನು ನಾನು ಅನುಭವಿಸಿದ್ದೇನೆ’ ಎಂದು ರಾಹುಲ್ ಇತ್ತೀಚೆಗೆ ಗುಜರಾತ್ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>