ಶಾಸಕರಾದ ಕೆ.ಬಿ.ಕೋಳಿವಾಡ ಮತ್ತು ಎಸ್.ಆರ್.ವಿಶ್ವನಾಥ್ ಪರ ಹಾಜರಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ‘ವಾದ ಮಂಡಿಸಲು ತಯಾರಿ
ದ್ದೇನೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇಂದು ಸಮಯವಿಲ್ಲ, ಮುಂದಿನ ಆದೇಶದವರೆಗೆ ತಡೆಯಾಜ್ಞೆ ಇರುತ್ತದೆ’ ಎಂದು ನಿರ್ದೇಶಿಸಿತು. ಅರ್ಜಿಯಲ್ಲಿ ವಿಧಾನಸಭೆ ಸ್ಪೀಕರ್, ದೂರುದಾರ ಕೆ.ಬಿ.ಕೋಳಿವಾಡ, ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ ಮತ್ತು ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.