ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದೂರು

Last Updated 7 ಡಿಸೆಂಬರ್ 2017, 10:01 IST
ಅಕ್ಷರ ಗಾತ್ರ

ಮೈಸೂರು: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿ, ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ದೂರನ್ನು ಸ್ವೀಕರಿಸಿದ ನ್ಯಾಯಾಲಯ ದೇವರಾಜ ಪೊಲೀಸ್ ಠಾಣೆಗೆ ವರ್ಗಾಯಿಸಿದೆ. ‘ಪ್ರಕರಣ ನಡೆದಿರುವುದು ಬೆಳಗಾವಿಯ ಕಿತ್ತೂರಿನಲ್ಲಿ. ಹೀಗಾಗಿ, ದೂರನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು’ ಎಂದು ನಗರ ಪೊಲೀಸ್ ಕಮೀಷನರ್ ಡಾ.ಎ.ಎಸ್. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT