ಹಕ್ಕುಪತ್ರ ನೀಡುವ ಕೆಲಸವನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಜನರು ಅನಧಿಕೃತವಾಗಿ ಮನೆ ಕಟ್ಟಿಕೊಂಡಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಭೂಮಿಯ ನಕಾಶೆ, ಕಂದಾಯ ಇಲಾಖೆ ದಾಖಲೆಗಳೊಂದಿಗೆ ತೆರಳಬೇಕು. ಸಾಧ್ಯವಾದರೆ ಅಲ್ಲಿಯೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದೂ ಕಾಗೋಡು ಹೇಳಿದರು.