ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘1992, ಡಿಸೆಂಬರ್ 6 ರಂದು ಏನಾಗುತ್ತದೆ ಎನ್ನುವ ಕಲ್ಪನೆ ಯಾರಿಗೂ ಇರಲಿಲ್ಲ. ಹಿಂದಿನ ದಿನ ರಾತ್ರಿ ಸರ್ವೋಚ್ಛ ಸಮಿತಿ ಸಭೆ ನಡೆಯಿತು. ಅದರಲ್ಲಿ ಸಾಂಕೇತಿಕ ಕರಸೇವೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು.ಸಾಂಕೇತಿಕ ಕರಸೇವೆ ಮಾಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೇವಲ ಸ್ವಚ್ಛಗೊಳಿಸುವ ಕೆಲಸ ಬಿಟ್ಟರೆ ಬೇರೆ ಯಾವ ಕೆಲಸ ಮಾಡುವುದಿಲ್ಲ ಎಂದು ಪ್ರಧಾನಿಗೆ ನಾವು ಲಿಖಿತ ಹೇಳಿಕೆ ನೀಡಿದ್ದೆವು’ ಎಂದು ತಿಳಿಸಿದರು.