ಹುಬ್ಬಳ್ಳಿ: ‘ಹುಬ್ಬಳ್ಳಿಯ ಗಣೇಶಪೇಟೆಯು ನನಗೆ ಪಾಕಿಸ್ತಾನದಂತೆ ಕಾಣಿಸುತ್ತದೆ’ ಎಂದು ಮುತುವಲ್ಲಿ ಅಬ್ದುಲ್ ಹಮೀದ್ ಖೈರಾತಿ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಹಾಗೂ ಆ ವೇಳೆ ವೇದಿಕೆಯಲ್ಲಿ ಇದ್ದ ಉತ್ತರ ಉಪ ವಿಭಾಗ ಎಸಿಪಿ ದಾವೂದ್ ಖಾನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಶಹರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.