ಎನ್ಜಿಟಿಯ ಅಧ್ಯಕ್ಷ ಸ್ವತಂತ್ರ ಕುಮಾರ್ ಅವರ ನೇತೃತ್ವದ ಪೀಠ, ಯಮುನಾ ತೀರದಲ್ಲಿ ವಿಶ್ವ ಸಂಸ್ಕೃತಿ ಉತ್ಸವ ಆಯೋಜನೆಯಿಂದ ಅಲ್ಲಿನ ಪರಿಸರಕ್ಕೆ ಹೆಚ್ಚಿನ ಹಾನಿಯಾಗಿದೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆ ದಂಡ ಪಾವತಿ ಮಾಡಿದ ಬಳಿಕ, ಆ ಹಣವನ್ನು ನದಿ ತಿರದ ಪರಿಸರ ಪುನರುಜ್ಜೀವನ ಯೋಜನೆಗಳಿಗೆ ಬಳಸುವಂತೆ ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ(ಡಿಡಿಎ) ಸೂಚಿಸಿದೆ.